Just In
Don't Miss!
- News
ಮ್ಯಾಡ್ರಿಡ್ ಕಟ್ಟಡ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Sports
ಐಪಿಎಲ್ 2021: ಬೆಂಗಳೂರಿಗೆ ಬಂದ ಹರ್ಷಲ್ ಪಟೇಲ್, ಡೇನಿಯಲ್ ಸ್ಯಾಮ್ಸ್!
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಳ್ಳು ಸುದ್ದಿ ಪ್ರಕಟಿಸಿದ ಚಾನೆಲ್ ವಿರುದ್ಧ ರಘು ದೀಕ್ಷಿತ್ ಗರಂ
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದ್ದು. ಸುಳ್ಳು ಸುದ್ದಿ ಪ್ರಕಟಿಸಿರುವ ಯೂಟ್ಯೂಬ್ ಚಾನೆಲ್ ಮೇಲೆ ಗರಂ ಆಗಿದ್ದಾರೆ ರಘು ದೀಕ್ಷಿತ್.
'ರಘು ದೀಕ್ಷಿತ್ ಆತ್ಮಹತ್ಯೆ, ಕಣ್ಣೀರಿನಲ್ಲಿ ಕನ್ನಡ ಚಿತ್ರರಂಗ, ಏನಾಯ್ತು?' ಎಂಬ ಹೆಡ್ಲೈನ್ ನೀಡಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿಯೊಂದನ್ನು ಪ್ರಕಟಿಸಿದೆ.
ಆದರೆ ವಿಡಿಯೋನಲ್ಲಿ 'ರಘು ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಹೇಳಿಲ್ಲ. ಬದಲಿಗೆ ರಘು ದೀಕ್ಷಿತ್ ಖಿನ್ನತೆಗೆ ಒಳಗಾಗಿದ್ದರು. ಈ ವಿಷಯವನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಿದ್ದಾರೆ. ಆದರೆ ಹೆಡ್ಲೈನ್ ನಲ್ಲಿ ಮಾತ್ರ 'ರಘು ದೀಕ್ಷಿತ್ ಆತ್ಮಹತ್ಯೆ' ಎಂದು ದೊಡ್ಡದಾಗಿ ಹಾಕಿ ಓದುಗರು ದಾರಿ ತಪ್ಪುವಂತೆ ಮಾಡಿದ್ದಾರೆ.
ಯೂಟ್ಯೂಬ್ ಚಾನೆಲ್ನ ವಿಡಿಯೋದ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ರಘು ದೀಕ್ಷಿತ್, 'ಜೀವನದಲ್ಲಿ ಸಾಕಷ್ಟು ನೋಡಿದ್ದೇನೆ, ಆದರೆ ಇದು ಎಲ್ಲವನ್ನೂ ಮೀರಿಸಿದ್ದು' ಎಂದು ವ್ಯಂಗ್ಯ ಮಾಡಿದ್ದಾರೆ. ಜೊತೆಗೆ ಈ ಚಾನೆಲ್ ವಿರುದ್ಧ ದೂರು ನೀಡುವುದು ಹೇಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.
'ಫಿಲ್ಮ್ ತಂತ್ರ24' ಹೆಸರಿನ ಯೂಟ್ಯೂಬ್ ಚಾನೆಲ್ನವರು ಈ ಸುದ್ದಿ ಪ್ರಕಟಿಸಿದ್ದಾರೆ. ರಘು ದೀಕ್ಷಿತ್ ಮಾತ್ರವೇ ಅಲ್ಲದೆ. ಇನ್ನೂ ಕೆಲವರ ಬಗ್ಗೆ ಸುಳ್ಳು ಸುದ್ದಿಗಳನ್ನು ಈ ಚಾನೆಲ್ ಪ್ರಕಟಿಸಿದೆ. ನಟಿ ಅಮೂಲ್ಯಗೆ ಅಪಘಾತವಾಗಿದೆ ಎಂಬ ಸುದ್ದಿಯನ್ನು ಸಹ ಈ ಯೂಟ್ಯೂಬ್ ಚಾನೆಲ್ ಪ್ರಕಟಿಸಿದೆ.
ನಟ ರಘು ದೀಕ್ಷಿತ್ ಇತ್ತೀಚೆಗೆ ನಿರೂಪಕಿ ಅನುಶ್ರೀಗೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ತಾವು ಖಿನ್ನತೆಗೆ ಒಳಗಾಗಿದ್ದುದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾಗಿ ಹೇಳಿದ್ದರು. ಇದನ್ನೇ ಇಟ್ಟುಕೊಂಡು ಈ ಯೂಟ್ಯೂಬ್ ಚಾನೆಲ್ ಹೀಗೆ ತಿರುಚಿದ, ದಾರಿ ತಪ್ಪಿಸುವ ಸುದ್ದಿಯನ್ನು ಪ್ರಕಟಿಸಿದೆ.