Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧ್ರುವ ಸರ್ಜಾ ಆಸ್ಪತ್ರೆಗೆ ದಾಖಲು? ಸುದ್ದಿ ನಿಜವೇ?
ಚಿರಂಜೀವಿ ಸರ್ಜಾ ನಿಧನ ಹೊಂದಿ ತಿಂಗಳು ಸಹ ಆಗಿಲ್ಲ. ಚಿರಂಜೀವಿ ಅಗಲಿಕೆಯ ನೋವು ಕುಟುಂಬದವರನ್ನು, ಗೆಳೆಯರನ್ನು, ಅಭಿಮಾನಿಗಳನ್ನು ಇನ್ನೂ ಬಿಟ್ಟಿಲ್ಲ.
Recommended Video
ಈ ನೋವಿನ ನಡುವೆಯೇ ಚಿರಂಜೀವಿ ಸರ್ಜಾ ಸಹೋದರ, ಖ್ಯಾತ ನಟ ಧ್ರುವ ಸರ್ಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದು ಅರ್ಧ ಸತ್ಯವಾಗಿದೆ.
ಫನ್ ಗಾಗಿ ಮಾಡಿದ್ದು, ಆದರೀಗ ಅಮೂಲ್ಯವಾದ ವಿಡಿಯೋವಾಗಿದೆ: ಧ್ರುವ ಸರ್ಜಾ ಪತ್ನಿ
ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಬಹಳ ಹಚ್ಚಿಕೊಂಡಿದ್ದ ಧ್ರುವ ಸರ್ಜಾ ಅಣ್ಣನ ನೆನಪಿನಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿದ್ದಾರೆ (ಡಿಪ್ರೆಶನ್) ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧ್ರುವ ಸರ್ಜಾ ಹಾಗೂ ಅವರ ಪೋಷಕರು ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಈಗ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ.
ಧ್ರುವ ಸರ್ಜಾ ಖಿನ್ನತೆಗೆ ಒಳಗಾಗಿದ್ದಾರೆ?
ಧ್ರುವ ಸರ್ಜಾ ಅವರು ತುಸು ಖಿನ್ನತೆಗೆ ಒಳಗಾಗಿರುವುದು ನಿಜ. ಅವರು ಊಟ-ತಿಂಡಿ ಸರಿಯಾಗಿ ಮಾಡುತ್ತಿಲ್ಲ. ಬೇಸರದಲ್ಲಿದ್ದರು, ಹಾಗಾಗಿ ಅವರು ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಹಾಗೂ ಚಿಕಿತ್ಸೆ ಪಡೆದಿದ್ದಾರೆ. ಅವರ ಪೋಷಕರೂ ಸಹ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದರು. ಈಗ ಎಲ್ಲರೂ ಡಿಸ್ಚಾರ್ಜ್ ಆಗಿ ಬಂದಿದ್ದಾರೆ.
ಪನ್ನಗಾಭರಣ ಅವರಿಂದ ಸ್ಪಷ್ಟನೆ
ಚಿರಂಜೀವಿ ಸರ್ಜಾ, ಧ್ರುವ ಸರ್ಜಾ ಇಬ್ಬರಿಗೂ ಆತ್ಮೀಯರಾಗಿರುವ ನಿರ್ದೇಶಕ ಪನ್ನಗಾಭರಣ ಅವರ ಬಳಿ ಫಿಲ್ಮೀಬೀಟ್ ತಂಡ ಮಾತನಾಡಿದ್ದು, ಧ್ರುವ ಸರ್ಜಾ ಅವರು ಆರಾಮವಾಗಿದ್ದಾರೆ. ಅವರು ಆಸ್ಪತ್ರೆಗೆ ಸೇರಿಲ್ಲ ಮನೆಯಲ್ಲಿಯೇ ಇದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ಇನ್ನೂ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
'ನೀನಿಲ್ಲದೆ ಇರಲು ಆಗುತ್ತಿಲ್ಲ': ಅಣ್ಣ ಚಿರು ಬಗ್ಗೆ ಧ್ರುವ ಭಾವುಕ ನುಡಿ
ಧ್ರುವ ಅವರು ಆರೋಗ್ಯವಾಗಿದ್ದಾರೆ
ನಾನು ಧ್ರುವ ಅವರ ಪತ್ನಿ ಪ್ರೇರಣ ಅವರೊಟ್ಟಿಗೂ ಮಾತನಾಡಿ ಧ್ರುವ ಸರ್ಜಾ ಆರೋಗ್ಯದ ಬಗ್ಗೆ ವಿಚಾರಿಸಿದ್ದು ಧ್ರುವ ಸರ್ಜಾ ಅವರು ಪೂರ್ಣವಾಗಿ ಆರೋಗ್ಯವಾಗಿದ್ದಾರೆ ಅದರ ಬಗ್ಗೆ ಸ್ವಲ್ಪವೂ ಅನುಮಾನ ಬೇಡ ಎಂದು ಪನ್ನಗಾಭರಣ ಭರವಸೆ ನೀಡಿದ್ದಾರೆ.
ಚಿರು ನಿಧನ ಹೊಂದುವ ಹಿಂದಿನ ದಿನ ಕ್ಲಿಕ್ಕಿಸಿದ ಫೋಟೋ ಹಂಚಿಕೊಂಡ ಧ್ರುವ ಸರ್ಜಾ
ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ
ಚಿರಂಜೀವಿ ಸರ್ಜಾ ಅವರ ಅಗಲಿಕೆ ಧ್ರುವ ಸರ್ಜಾ ಅವರಿಗೆ ತೀವ್ರ ಆಘಾತ ಉಂಟುಮಾಡಿದೆ. ಚಿರಂಜೀವಿ ಸರ್ಜಾ ನೆನಪಲ್ಲಿ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಕೆಲ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ಅಣ್ಣನ ನಿಂತುಹೋದ ಸಿನಿಮಾಗಳಿಗೆ ದನಿ ಕೊಟ್ಟು ಸಿನಿಮಾ ಪೂರ್ಣಗೊಳಿಸುತ್ತಿದ್ದಾರೆ.