ವಿಷ್ಣುವರ್ಧನ್ ಆಧ್ಯಾತ್ಮಿಕ ಗುರು, ಸಂಸ್ಕೃತ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಅವರು ಇಂದು (ಡಿಸೆಂಬರ್ 13) ರಂದು ಉಡುಪಿಯ ಅಂಬಲಪಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಪದ್ಮಶ್ರೀ ಪುರಸ್ಕೃತರಾಗಿದ್ದ ಬನ್ನಂಜೆ ಗೋವಿಂದಾಚಾರ್ಯ ಅವರು, ಡಾ.ವಿಷ್ಣುವರ್ಧನ್ ಅವರ ಆಧ್ಯಾತ್ಮಿಕ ಗುರು ಆಗಿದ್ದರು. ಅವರು ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು. ಅನೇಕ ಪತ್ರಿಕೆಗಳಿಗೆ ಅಂಕಣಗಳನ್ನು ಸಹ ಬರೆದಿದ್ದರು ಬನ್ನಂಜೆ ಗೋವಿಂದಾಚಾರ್ಯ.

ಸಿನಿಮಾಗಳೊಂದಿಗೆ ಸಹ ಅಲ್ಪ ಸಂಪರ್ಕ ಹೊಂದಿದ್ದ ಬನ್ನಂಜೆಯವರು, ಜಿವಿ ಅಯ್ಯರ್ ನಿರ್ದೇಶನದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಸಂಸ್ಕೃತ ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದರು.

Famous Sanskrit Scholar Bannanje Govindacharya Passed Away

ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಸೇವೆಗೈದಿರುವ ಅವರು, ಬಾಣಭಟ್ಟನ ಕಾದಂಬರಿ, ಶಾಕುಂತಲಾ, ಶೂದ್ರಕನ ಮೃಚ್ಛಕಟಿಕ ಇತ್ಯಾದಿ ಚಾರಿತ್ರಿಕ ಕೃತಿಗಳನ್ನು ಸಂಸ್ಕೃತದಿಂದ ಕನ್ನಡದಕ್ಕೆ ಅನುವಾದಿಸಿದ್ದರು. ಅನೇಕ ಸ್ತೋತ್ರ, ಮಂತ್ರಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

Recommended Video

ಉಹಾಪೋಹಗಳಿಗೆ ತೆರೆ ಎಳೆದ ಮಾಧವನ್ | Madhavan | Filmibeat Kannada

ತಮ್ಮ ಆಧ್ಯಾತ್ಮಿಕ ಪ್ರವಚನಗಳಿಂದ ಖ್ಯಾತರಾಗಿದ್ದ ಗೋವಿಂದಾಚಾರ್ಯರು, ನಟ ವಿಷ್ಣುವರ್ಧನ್ ಅವರ ಆಧ್ಯಾತ್ಮಿಕ ಗುರುಗಳೂ ಸಹ ಆಗಿದ್ದರು. ಇತ್ತೀಚೆಗಷ್ಟೆ ಗೋವಿಂದಾಚಾರ್ಯರ ಪುತ್ರ ಸಹ ವಿಧಿವಶರಾಗಿದ್ದರು.

More from Filmibeat

English summary
Famous Sanskrit Scholar Bannange Govindacharya passed away. He was 85. He translated many historical Sanskrit works to Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X