Don't Miss!
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಶುರುವಾಯ್ತು ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒತ್ತಾಯ
ವಿಷ್ಣು ಸ್ಮಾರಕ.. ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲೋ..ಮೈಸೂರಿನಲ್ಲೋ.. ಅನ್ನೋ ಗೊಂದಲದಲ್ಲೇ ಸಮಯ ಕಳೆದು ಹೋಗಿದೆ. ಸರ್ಕಾರ ಬದಲಾಗಿದೆ ಆದರೆ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲು ಯಾರು ಮುಂದಾಗಿಲ್ಲ. ಪ್ರಣಾಳಿಕೆಯಲ್ಲಿ ವಿಷ್ಣು ಸ್ಮಾರಕವನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲೇ ಮಾಡುವುದಾಗಿ ತಿಳಿಸಿದ್ದ ಕುಮಾರಸ್ವಾಮಿ ಅವರಿಗೆ ವಿಷ್ಣು ಅಭಿಮಾನಿಗಳು ಮನವಿ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಮಾತಿನಂತೆ ಡಾ.ವಿಷ್ಣು ಸ್ಮಾರಕ ನಿರ್ಮಿಸಿಕೊಡಬೇಕೆಂದು ವಿಎಸ್ಎಸ್ ಸಂಘಟನೆಯಿಂದ ಮನವಿ ಪತ್ರ ಸಲ್ಲಿಸಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಹೋರಾಟಗಳು ಮಾಡಿ, ಅನೇಕ ಸಲ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಆದ್ದರಿಂದ ಹೊಸ ಸರ್ಕಾರದ ಅವಧಿಯಲ್ಲಿ ಮತ್ತೆ ವಿಎಸ್ಎಸ್ ತನ್ನ ಪ್ರಯತ್ನ ಆರಂಭಿಸಿದೆ.
ರಾಜ್, ವಿಷ್ಣು, ಶಂಕ್ರಣ್ಣ ,ತೂಗುದೀಪ್ ಶ್ರೀನಿವಾಸ್ ಇಲ್ಲಿ ಎಲ್ಲರೂ ಒಂದೇ
ರಾಜ್ಯದಲ್ಲಿ ವಿಷ್ಣುವರ್ಧನ್ ಅವರನ್ನು ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಷ್ಣುವರ್ಧನ್ ಅವರ ಜೊತೆ ಉತ್ತಮ ಸ್ನೇಹವನ್ನು ಹೊಂದಿದ್ದರು. ರಾಜಕೀಯವನ್ನು ಹೊರತು ಪಡಿಸಿದಂತೆ ವಯಕ್ತಿವಾಗಿ ಆತ್ಮೀಯರಾಗಿದ್ದರು. ಅದೇ ವಿಶ್ವಾಸದಲ್ಲಿ ಅಭಿಮಾನಿಗಳು ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಿಕೊಂಡಿ ಎಂದು ಕೇಳಿಕೊಂಡಿದ್ದಾರೆ.
ಮೊದಲಿಗೆ ಸ್ಮಾರಕದ ವಿಚಾರವಾಗಿ ನಿಮ್ಮ ಬಳಿ ಚರ್ಚೆ ಮಾಡಲು ಸಮಯ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ..ಇಲ್ಲಿ ಇರುವುದು ಇಚ್ಛಾ ಶಕ್ತಿಯ ಕೊರತೆ ಎಂದು ವಿಎಸ್ಎಸ್ ನ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಸಂಘಟನೆಯವರು ಭೇಟಿ ಆಗುವ ಮುಂಚೆಯೇ ನಟಿ ಭಾರತಿ ಹಾಗೂ ಅನಿರುದ್ಧ್ ಸಿ ಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಶುಭಕೋರಿ ಬಂದಿದ್ದಾರೆ. ಮನವಿ ಸ್ವೀಕರಿಸಿರುವ ಮುಖ್ಯಮಂತ್ರಿಯವರು ಇದಕ್ಕೆ ಹೇಗೆ ಸ್ಪಂದಿಸಲಿದ್ದಾರೆ ಎನ್ನುವುದು ಕಾದು ನೋಡಬೇಕಾಗಿದೆ.