Don't Miss!
- News ಲೋಕಸಭೆ ಚುನಾವಣೆ: ಕಲಬುರಗಿ ಮತದಾರರು, ವಿಧಾನಸಭಾ ಕ್ಷೇತ್ರ ಮಾಹಿತಿ
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೀನ್ಯಾದಿಂದ ವಾಪಸ್ ಆದ ಡಿ ಬಾಸ್ ನೋಡಲು ಮುಗಿಬಿದ್ದ ಅಭಿಮಾನಿಗಳು
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈಲ್ಡ್ ಲೈಫ್ ಫೋಟೋಗ್ರಫಿಗಾಗಿ ಕೀನ್ಯಾಗೆ ತೆರೆಳಿದ್ದರು. ರಾಬರ್ಟ್ ಚಿತ್ರೀಕರಣದಲ್ಲಿ ಬ್ಯುಸಿ ಇದ್ದ ದರ್ಶನ್ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ಹಾಕಿ ಕೀನ್ಯಾ ಪ್ರವಾಸ ಕೈಗೊಂಡಿದ್ದರು. ಕೀನ್ಯಾದ ಕಾಡಿನಲ್ಲಿ ವನ್ಯ ಜೀವಿಗಳನ್ನು ಸೆರೆಹಿಡಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಕ್ಯಾಮರಾ ಜೊತೆ ಕೀನ್ಯಾಗೆ ತೆರಳಿದ್ದ ದರ್ಶನ್ ಒಂದಿಷ್ಟು ಪ್ರಾಣಿ-ಪಕ್ಷಿಗಳನ್ನು ಸೆರೆಹಿಡಿದುಕೊಂಡು ಬಂದಿದ್ದಾರೆ. ಮನೆಗೆ ತೆರಳಿರುವ ದರ್ಶನ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಇಂದು ಬೆಳ್ಳಂಬೆಳಗ್ಗೆ ಅಭಿಮಾನಿಗಳು ದರ್ಶನ್ ಮನೆ ಮುಂದೆ ಜಮಾಯಿಸಿದ್ದರು. ನೆಚ್ಚಿನ ನಟನ ದರ್ಶನಕ್ಕಾಗಿ ಬೆಳಗ್ಗೆಯಿಂದನೆ ಮನೆಮುಂದೆ ಕಾಯುತ್ತಿದ್ದರು.
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
ಇಂದು ಸಂಡೆ ಹಾಗಾಗಿ ದರ್ಶನ್ ಮನೆಯಲ್ಲೆ ಇದ್ದರು. ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಜೊತೆ ಒಂದಿಷ್ಟು ಸಮಯ ಕಾಲಕಳೆದ್ದಾರೆ. ಅಭಿಮಾನಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟು ಸಂತಸಪಟ್ಟಿದ್ದಾರೆ. ಇನ್ನು ಒಂದಿಷ್ಟು ಅಭಿಮಾನಿಗಳು ಅವರ ವಾಹನದ ಮೇಲೆ ದರ್ಶನ್ ಆಟೋಗ್ರಾಫ್ ಹಾಕಿಸಿಕೊಂಡು ಖುಷಿಪಟ್ಟಿದ್ದಾರೆ.
ದರ್ಶನ್ ಗೆ ಇರುವ ಫ್ಯಾನ್ ಬೇಸ್ ಎಂತಹದ್ದು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ ದರ್ಶನ್ ನೋಡಲು ಮನೆಯವರೆಗೂ ಬರುವ ಅಭಿಮಾನಿಗಳನ್ನು ಯಾವತ್ತು ಕಾಯಿಸುವುದಿಲ್ಲ. ಅಭಿಮಾನಿಗಳನ್ನು ಮಾತನಾಡಿಸಿ ಅವರ ಜೊತೆ ಫೋಟೋಗೆ ಫೋಸ್ ನೀಡಿ ಅಭಿಮಾನಿಗಳ ಆಸೆಯನ್ನು ಈಡೇರಿಸುತ್ತಾರೆ.
ಸದ್ಯ ಕೀನ್ಯಾದಿಂದ ವಾಪಾಸ್ ಆಗಿರುವ ದರ್ಶನ್ ಅಕ್ಟೋಬರ್ 2ರಿಂದ ಮತ್ತೆ ಚಿತ್ರೀಕರಣಕ್ಕೆ ಹೊರಡಲಿದ್ದಾರೆ. ರಾಬರ್ಟ್ ಚಿತ್ರದ ಮುಂದಿನ ಹಂತದ ಚಿತ್ರೀಕರಣ ಉತ್ತರ ಭಾರತದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಪ್ರಮುಖ ದೃಶ್ಯದ ಚಿತ್ರೀಕರಣಕ್ಕಾಗಿ ಚಿತ್ರತಂಡ ಉತ್ತರ ಭಾರತದ ಕಡೆ ಪಯಾಣ ಬೆಳೆಸಲಿದೆ. ರಾಬರ್ಟ್ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದರ್ಶನ್ ಗೆ ಜೋಡಿಯಾಗಿ ಆಶಾ ಭಟ್ ಕಾಣಿಸಿಕೊಳ್ಳುತ್ತಿದ್ದಾರೆ.