Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊನ್ನೆ ದರ್ಶನ್ ಗೆ ಆಗಿದ್ದೇ ಈಗ ಯಶ್ ಗೂ ಆಯ್ತು.!
Recommended Video
ನಟ ದರ್ಶನ್ ಮತ್ತು ಯಶ್ ಇಬ್ಬರು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡ್ತಿದ್ದಾರೆ. ಕಳೆದ ಮೂರು ದಿನದಿಂದ ಶ್ರೀರಂಗಪಟ್ಟಣ, ಕೆಆರ್ ಪೇಟೆ, ಕೆ.ಆರ್ ನಗರ, ಮಂಡ್ಯ ನಗರಗಳಲ್ಲಿ ಮತಯಾಚನೆ ಮಾಡ್ತಿರುವ ಡಿ ಬಾಸ್ ಮತ್ತು ರಾಕಿ ಭಾಯ್ ಗೆ ಭರ್ಜರಿ ಸ್ವಾಗತ ಸಿಕ್ಕಿದೆ.
ಈ ಮಧ್ಯೆ ದರ್ಶನ್ ಪ್ರಚಾರ ಮಾಡುವ ವೇಳೆ ಕೆಲವು ಅಭಿಮಾನಿಗಳು ಡಿ ಬಾಸ್ ವಿರುದ್ಧ ಆಕ್ರೋಶಗೊಂಡ ಘಟನೆ ನಡೆದಿತ್ತು. ಹಳ್ಳಿ ಹಳ್ಳಿಗೂ ಹೋಗಿ ಮತ ಕೇಳುತ್ತಿರುವ ದರ್ಶನ್ ಅಂದು ಸಂಜೆ ಸಮಯ ಹೆಚ್ಚು ಆದ ಕಾರಣ ಪ್ರಚಾರ ಮುಂದೂಡುವ ನಿರ್ಧಾರಕ್ಕೆ ಬಂದಿದ್ದರು.
ಆದ್ರೆ, ಹಳ್ಳಿಯೊಳಗೆ ಬಾರದೆ ವಾಪಸ್ ಹೋಗುತ್ತಿದ್ದ ದರ್ಶನ್ ವಿರುದ್ಧ ಅಭಿಮಾನಿಗಳು ಮುನಿಸಿಕೊಂಡರು. ಊರಿನ ಒಳಗೆ ಬರಲೇಬೇಕು ಎಂದು ಪಟ್ಟು ಹಿಡಿದರು. ಇಲ್ಲವಾದಲ್ಲಿ ನಿಖಿಲ್ ಗೆ ಮತ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇದರಿಂದ ನಿರ್ಧಾರ ಬದಲಿಸಿದ ದರ್ಶನ್, ಆ ಊರಿನ ಒಳಗೆ ಹೋಗಿ ಪ್ರಚಾರ ಮಾಡಿದ್ದರು.
'ನಾವು ಬಿಸಿಲಿನಲ್ಲಿ ಆಡಿ ಬಂದವರು' ಸಿಎಂ ಹೇಳಿಕೆಗೆ ರಾಕಿ ಭಾಯ್ ಪಂಚ್
ನಂತರ ಅಭಿಮಾನಿಗಳು ಕೂಡ ಖುಷಿಯಾಗಿ ದರ್ಶನ್ ಅವರಿಗೆ ಗೌರವದಿಂದ ಜೈಕಾರ ಹಾಕಿ ಸಂಭ್ರಮಿಸಿದರು. ಇಂತಹದ್ದೇ ಘಟನೆ ಯಶ್ ಅವರಿಗೂ ನಡೆಯಿತು. ಸಮಯದ ಅಭಾವದಿಂದ ಊರಿನ ಒಳಗೆ ಹೋಗಲು ಸಾಧ್ಯವಾಗದೇ ವಾಪಸ್ ಹೋಗಲು ಯಶ್ ನಿರ್ಧರಿಸಿದ್ದರು.
ಮಂಡ್ಯ ಪ್ರಚಾರದಲ್ಲಿ ಈ ನಾಲ್ಕು ಹೆಸರನ್ನ ಪದೇ ಪದೇ ನೆನಪಿಸುತ್ತಿರುವ ದರ್ಶನ್
ಆದ್ರೆ, ಅಭಿಮಾನಿಗಳು ಬಿಡಲಿಲ್ಲ. ನಮ್ಮ ಊರಿಗೆ ಅಂಬರೀಶ್ ಅವರು ಪ್ರಚಾರಕ್ಕೆ ಬಂದಿದ್ದರು. ನೀವು ಬರಲೇಬೇಕು ಎಂದು ಪಟ್ಟು ಹಿಡಿದರು. ಅಂತಿಮವಾಗಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಯಶ್ ಊರಿನ ಒಳಗೆ ಹೋಗಿ ಪ್ರಚಾರ ಮಾಡಿದ್ರು.