Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಡಿನಾಡಿನಲ್ಲಿ ಅನಾವರಣ ಆಗಲಿದೆ ಯಜಮಾನ್ರ ಪುತ್ಥಳಿ
ಸ್ಯಾಂಡಲ್ ವುಡ್ ನ ಯಜಮಾನ, ಸಾಹಸ ಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿಗಳು ಏನಾದರೊಂದು ಕಾರ್ಯಕ್ರಮ ನಡೆಸುತ್ತಲೆ ಇರುತ್ತಾರೆ. ಸೆಪ್ಟಂಬರ್ 18ರಂದು ಡಾ.ವಿಷ್ಣುವರ್ಧನ ನಾಟಕೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಇದಕ್ಕು ಮೊದಲೆ ಈಗ ವಿಷ್ಣು ಅಭಿಮಾನಿಗಳು ಸಾಹಸ ಸಿಂಹನ ಪುತ್ಥಳಿಯನ್ನು ನಿರ್ಮಾಣ ಮಾಡಿ ಅದ್ದೂರಿಯಾಗಿ ಅನಾವರಣ ಮಾಡುತ್ತಿದ್ದಾರೆ.
ವಿಶೇಷ ಅಂದ್ರೆ ಗಡಿನಾಡಿನಲ್ಲಿ ವಿಷ್ಣುವರ್ಧನ್ ಪ್ರತಿಮೆಯನ್ನು ಅನಾವರಣ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ ಅಹನ್ಯ ಗ್ರಾಮದಲ್ಲಿ ಅಭಿಮಾನಿಗಳು ವಿಷ್ಣುವರ್ಧನ್ ಪುತ್ಥಳಿಯನ್ನು ನಿರ್ಮಾಣ ಮಾಡಿದ್ದಾರೆ. ಈ ಪ್ರತಿಮೆಯನ್ನು ಇದೆ ತಿಂಗಳು ಸೆಪ್ಟೆಂಬರ್ 8ರಂದು ಬೆಳಗ್ಗೆ 8ಗಂಟೆಗೆ ಅನಾವರಣ ಮಾಡುತ್ತಿದ್ದಾರೆ.
ಎರಡುವರೆ ದಶಕದ ಬಳಿಕ ಮತ್ತೆ ಬಂದ ಕಮಾಂಡೋ ಅಜಯ್
ವಿಷ್ಣುರ್ವಧನ್ ಅಪ್ಪಟ ಅಭಿಮಾನಿ ಭರತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅಪಾರ ಸಂಖ್ಯೆ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಿಷ್ಣುವರ್ಧನ್ ಪ್ರತಿಮೆಗಳು ಈಗಾಗಲೆ ಸಾಕಷ್ಟು ಇವೆ. ಆದ್ರೆ ಗಡಿನಾಡಿನಲ್ಲಿ ಅನಾವರಣ ಆಗುತ್ತಿರುವುದು ವಿಶೇಷ.
ವಿಷ್ಣುವರ್ಧನ್ ಹೆಸರನ್ನು ಕನ್ನಡಿಗರ ಮದಾಳದಲ್ಲಿ ಹಚ್ಚ ಹಸಿರಾಗಿರಿಸುವ ಸಲುವಾಗಿ ಯಜಮಾನ್ರಿಗೊಂದು ರಂಗನಮನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದೆ ತಿಂಗಳು 18ರಿಂದ ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಅಭಿಮಾನಿಗಳು ಈ ಅದ್ಭುತ ಕಾರ್ಯಕ್ಕೆ ಕಿಚ್ಚ ಸುದೀಪ್ ಕೂಡ ಸಾಥ್ ನೀಡಿದ್ದಾರೆ.