"ತೂಗುದೀಪ ಶ್ರೀನಿವಾಸ್ ಹುಟ್ಟುಹಬ್ಬದ ಸಂಭ್ರಮ"ದಲ್ಲಿ ಅಭಿಮಾನಿಗಳು
Recommended Video

ಕನ್ನಡ ಸಿನಿಮಾರಂಗದಲ್ಲಿ ಖಳನಟನಿಗೂ ಬೇರೆಯದ್ದೇ ಗತ್ತು-ಗಾಂಭೀರ್ಯ ಇದೆ ಎನ್ನುವುದನ್ನ ಅಭಿನಯದ ಮೂಲಕವೇ ಪ್ರೇಕ್ಷಕರಿಗೆ ತೋರಿಸಿಕೊಟ್ಟ ನಟ ತೂಗುದೀಪ ಶ್ರೀನಿವಾಸ್. ಕಲಾವಿದನಿಗೆ ಸಾವಿಲ್ಲ. ಸಾವು ಅವರ ದೇಹಕ್ಕೆ ಮಾತ್ರ ಎನ್ನುವ ಮಾತಿದೆ. ಅಂತೆಯೇ ತೂಗುದೀಪ ಶ್ರೀನಿವಾಸ್ ಅಪಾರ ಅಭಿಮಾನಿಗಳನ್ನ ಅಗಲಿದ್ದರು ಕೂಡ ಇಂದಿಗೂ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರ ಎನ್ನುವುದು ಸತ್ಯ.
ಕನ್ನಡ ಸಿನಿಮಾರಂಗದ ನಟ ತೂಗುದೀಪ ಶ್ರೀನಿವಾಸ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹಿರಿಯರಿಂದ ಕಿರಿಯರ ವರೆಗೂ ಅಭಿಮಾನಿಗಳನ್ನ ಸಂಪಾದನೆ ಮಾಡಿರುವ ತೂಗುದೀಪ ಶ್ರೀನಿವಾಸ್ ಅವರ ನೆನಪಿನಲ್ಲಿ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನಟ ತೂಗುದೀಪ ಶ್ರೀನಿವಾಸ್ ಅವರ ಅಪರೂಪದ ಫೋಟೋಗಳನ್ನ ಹಾಕಿ ಮಾರೆಯಾಗಿರುವ ಮಾಣಿಕ್ಯನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿರುವ ತೂಗುದೀಪ ಶ್ರೀನಿವಾಸ್ ಅವರ ಪುತ್ಥಳಿಗೆ ಹೂಗಳಿಂದ ಸಿಂಗಾರ ಮಾಡಿ ಪೂಜೆ ಸಿಹಿ ಹಂಚಿದ್ದಾರೆ.

ಸಾಕಷ್ಟು ವರ್ಷಗಳು ಸಿನಿಮಾರಂಗದ ಮೂಲಕ ಅಭಿಮಾನಿಗಳಿಗೆ ರಂಜಿಸಿ ಮುಂದಿನ ಪೀಳಿಗೆಗೆ ಅವರ ನೆನಪುಗಳನ್ನ ಉಳಿಸಿಕೊಡುವುದರ ಜೊತೆಯಲ್ಲಿ ಅವರ ಮಕ್ಕಳನ್ನೂ ಚಿತ್ರರಂಗದಲ್ಲಿ ಸೇವೆ ಸಲ್ಲಿಸುವಂತೆ ಮಾಡಿರುವ ಕಲಾವಿದ ತೂಗುದೀಪ್ ಶ್ರೀನಿವಾಸ್


Click it and Unblock the Notifications











