Don't Miss!
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Lifestyle ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್ ತಂಡದ ಮೇಲೆ ಅಭಿಮಾನಿಗಳಿಂದ ಒತ್ತಡ!
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಆ ಚಿತ್ರದ ಸೂಪರ್ ಸಕ್ಸಸ್ ಚಾಪ್ಟರ್ 2 ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಳ್ಳುವಂತೆ ಮಾಡಿದೆ. ಈಗಾಗಲೇ ಕೆಜಿಎಫ್ 2 ಶೂಟಿಂಗ್ ಆರಂಭವಾಗಿದೆ. ಮುಂದಿನ ವರ್ಷ ಸಿನಿಮಾ ಬರುತ್ತೆ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಹಾಗಿದ್ದರೂ ಅಭಿಮಾನಿಗಳು ಮಾತ್ರ ಸುಮ್ಮನೆ ಇರುತ್ತಿಲ್ಲ.
ಕೆಜಿಎಫ್ ಚಿತ್ರತಂಡದ ಮೇಲೆ ಅಭಿಮಾನಿಗಳು ಒತ್ತಡ ಹಾಕುತ್ತಿದ್ದಾರೆ. ಟ್ವಿಟ್ಟರ್, ಫೇಸ್ ಬುಕ್ ಹಾಗೂ ಇನ್ನಿತರ ಸೋಶಿಯಲ್ ಮೀಡಿಯಾಗಳಲ್ಲಿ ಕೆಜಿಎಫ್ ಅಪ್ಡೇಟ್ ನೀಡಿ ಎಂದು ಬೇಡಿಕೆಯಿಡುತ್ತಿದ್ದಾರೆ.
ಮನೆ ಮುಂದೆ ನೆರೆದಿದ್ದ ಕೇರಳ ಅಭಿಮಾನಿಗಳನ್ನು ನೋಡಿ ರಾಕಿ ಭಾಯ್ ಮಾಡಿದ್ದೇನು?
ಈ ಬಗ್ಗೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಪ್ರತಿಕ್ರಿಯಿಸಿದ್ದು, ''ಅಭಿಮಾನಿಗಳ ಭಾವನೆ, ಕಾತುರ ನಮಗೆ ಅರ್ಥವಾಗುತ್ತಿದೆ. ಚಾಪ್ಟರ್ 2 ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ಚಿತ್ರತಂಡ ನಿರ್ಧರಿಸಿದ ಬಳಿಕ, ಹೇಳುತ್ತೇವೆ. ದಯವಿಟ್ಟು ಸಹಕರಿಸಿ'' ಎಂದು ಮನವಿ ಮಾಡಿದ್ದಾರೆ.
ರಾಕಿ ಭಾಯ್ ಜೊತೆ 'ಅಧೀರ' ಸಂಜಯ್ ದತ್ ಪ್ರತ್ಯಕ್ಷ
2018ರ ಬಹುದೊಡ್ಡ ಹಿಟ್ ಸಿನಿಮಾ ಎನಿಸಿಕೊಂಡಿದ್ದ ಕೆಜಿಎಫ್, ಇಡೀ ಕನ್ನಡ ಚಿತ್ರರಂಗಕ್ಕೆ ಹೊಸ ಜೋಶ್ ತಂದಿತ್ತು. ಈ ಸಿನಿಮಾ ಬಳಿಕ ಸ್ಯಾಂಡಲ್ ವುಡ್ ಮಾರುಕಟ್ಟೆ ಕೂಡ ವಿಶ್ವಾದ್ಯಂತ ವಿಸ್ತರಿಸಿದೆ. ಪರಭಾಷೆ ನಿರ್ಮಾಪಕರು, ನಿರ್ದೇಶಕರು ಕನ್ನಡ ಚಿತ್ರಗಳ ಕಡೆ ಹೆಚ್ಚು ಗಮನ ಹರಿಸುವಂತಾಗಿದೆ.
ಇಷ್ಟೆಲ್ಲಾ ಹವಾ ಸೃಷ್ಟಿಸಿದ್ದ ಕೆಜಿಎಫ್ ಚಾಪ್ಟರ್ 2 ಸಿನಿಮಾ ನಮ್ಮಲ್ಲಿ ಮಾತ್ರವಲ್ಲ, ಹೊರರಾಜ್ಯಗಳಲ್ಲೂ ಭಾರಿ ನಿರೀಕ್ಷೆ ಇದೆ. ಟೀಸರ್, ಟ್ರೈಲರ್, ಪೋಸ್ಟರ್ ಏನಾದರೂ ಅಪ್ ಡೆಟ್ ಮಾಡಿ ಎಂದು ಫ್ಯಾನ್ಸ್ ಮುಗಿಬಿದ್ದಿರುವುದು ನೋಡಿದ್ರೆ, ಈ ಚಿತ್ರ ಎಷ್ಟು ಹೈಪ್ ಕ್ರಿಯೇಟ್ ಮಾಡಿದೆ ಎಂಬುದು ಅರ್ಥವಾಗುತ್ತೆ.