Don't Miss!
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ವಿಶೇಷ ಹಾಡು
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಲಂಡನ್ ನಲ್ಲಿಯೆ ಹುಟ್ಟುಹಬ್ಬ ಆರಿಸಿಕೊಳ್ಳುತ್ತಿದ್ದಾರೆ. ಲಂಡನ್ ನಿಂದನೆ ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ ಶಿವರಾಜ್ ಕುಮಾರ್. ಶಿವಣ್ಣ ಅವರಿಗೆ ಇಂದು ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.
ಶಿವಣ್ಣ ಹುಟ್ಟುಹಬ್ಬದ ಪ್ರಯುಕ್ತ ಇಂದು ಹ್ಯಾಟ್ರಿಕ್ ಹೀರೋ ಅಭಿನಯದ ಚಿತ್ರಗಳ ಒಂದಿಷ್ಟು ಇಂಟ್ರಸ್ಟಿಂಗ್ ಪೋಸ್ಟರ್ಸ್ ರಿಲೀಸ್ ಆಗಿವೆ. ಇದರ ಜೊತೆಗೆ ಅಭಿಮಾನಿಗಳು ವಿಶೇಷವಾದ ಹಾಡೊಂದನ್ನು ಮಾಡಿ ರಿಲೀಸ್ ಮಾಡಿದ್ದಾರೆ. ಶಿವಣ್ಣ ಬಗ್ಗೆಯ ಬರೆದಿರುವ ಈ ಹಾಡು ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಗಿಫ್ಟ್ ಆಗಿ ನೀಡಿದ್ದಾರೆ.
ಶಿವಣ್ಣ ಆಥಮ್ ಸಾಂಗ್ ಎನ್ನುವ ಹೆಸರಿನಲ್ಲಿ ಈ ಹಾಡನ್ನು ಪಿ ಆರ್ ಕೆ ಯು ಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗದೆ. 'ಕರುನಾಡ ಮನೆ ಮಗನು, ಕರುಣೆಯಲಿ ರಾಜನ ಮಗನು' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಕೇಳಿ ಶಿವಣ್ಣ ಫುಲ್ ಖುಷ್ ಆಗಿದ್ದಾರೆ.
ಲಂಡನ್ ನಿಂದ ಬಂದ ಬಳಿಕ ಅಭಿಮಾನಿಗಳ ಜೊತೆ ಶಿವಣ್ಣ ಹುಟ್ಟುಹಬ್ಬ ಆಚರಣೆ
ಅಂದ್ಹಾಗೆ ಈ ಹಾಡು ಚೇತನ್ ಕೃಷ್ಣ ಹಾಡಿದ್ದಾರೆ. ಈ ಹಾಡಿನ ಸಾಹಿತ್ಯವನ್ನು ಪ್ರಮೋದ್ ಜೋಯಿಸ್ ಬರೆದಿದ್ದಾರೆ. ಈ ಹಾಡಿನ ಪ್ಲಾನ್ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘಗಳಲ್ಲಿ ಒಂದಾಗಿರುವ ಶಿವಸೈನಾ ಅವರ ಪ್ಲಾನ್. ಈಗಾಗಲೆ ಶಿವಣ್ಣ ಈ ಹಾಡನ್ನು ಕೇಳಿ ಸಖತ್ ಇಷ್ಟಪಟ್ಟಿದ್ದಾರೆ. ಇಂದು ರಿಲೀಸ್ ಆಗುವ ಈ ಹಾಡು ಉತ್ತಮ ಪ್ರತಿಕ್ರಿಯೆ ಕೂಡ ಪಡೆದುಕೊಳ್ಳುತ್ತಿದೆ.
ಇನ್ನು ವಿಶೇಷ ಅಂದ್ರೆ ಶಿವಣ್ಣ ಅವರಿಗೆ ಈಗಾಗಲೆ ಸಾಕಷ್ಟು ಬಿರುದುಗಳಿವೆ. ಈಗ ಮತ್ತೊಂದು ಬಿರುದನ್ನು ಅಭಿಮಾನಿಗಳು ನೀಡಿದ್ದಾರೆ. ಹಾಡಿನನ್ನು ಗಿಫ್ಟ್ ಆಗಿ ನೀಡುವ ಜೊತೆಗೆ ಶಿವಣ್ಣ ಅವರಿಗೆ 'ಮಹಾನ್ ಕಲಾವಿದ' ಎಂಬ ಬಿರುದನ್ನು ನೀಡುತ್ತಿದ್ದಾರೆ. ಇದನ್ನು ಈ ಬಿರುದನ್ನು ಸಹ ಶಿವರಾಜ್ ಕುಮಾರ್ ಅಭಿಮಾನಿ ಸಂಘ 'ಶಿವಸೈನ್ಯ' ವತಿಯಿಂದ ನೀಡಲಗಿದೆ