Don't Miss!
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾಲಕ್ಷ್ಮಿ ಲೇಔಟ್ನ ವಾರ್ಡ್ಗೆ ಪುನೀತ್ ಹೆಸರಿಡುವಂತೆ ಅಭಿಮಾನಿಗಳಿಂದ ಮನವಿ!
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿದ ಬಳಿಕ ಅವರು ಮಾಡಿದ ಸಾಮಾಜಿಕ ಕೆಲಸಗಳು ಅಭಿಮಾನಿಗಳ ಮನಗೆದ್ದಿದೆ. ಕರ್ನಾಟಕದ ಮೂಲೆ ಮೂಲೆಯಲ್ಲಿರುವ ಯುವಕರು ಅಪ್ಪು ಕೆಲಸದಿಂದ ಪ್ರೇರಣೆ ಪಡೆದು ಸಮಾಜ ಮುಖಿ ಕೆಲಸಕ್ಕೆ ಕೈ ಹಾಕಿದ್ದಾರೆ.
ಪುನೀತ್ ರಾಜ್ಕುಮಾರ್ ಕಣ್ಮರೆಯಾಗಿ ಈಗಾಗಲೇ 8 ತಿಂಗಳುಗಳಾಗಿವೆ. ಆದರೂ, ಪುನೀತ್ ಅಭಿಮಾನಿಗಳು ಅವರ ಹೆಸರನ್ನು ಅಜರಾಮರ ಮಾಡುವುದಕ್ಕೆ ಮುಂದಾಗಿದ್ದಾರೆ. ಒಂದಲ್ಲ ಒಂದು ರೀತಿ ಅಪ್ಪುನಾ ಜೀವಂತವಾಗಿಡುವಂತೆ ಮಾಡುವುದಕ್ಕೆ ಮುಂದಾಗಿದ್ದಾರೆ.
ಪುನೀತ್ ಯಾರಿಗೂ ಫೋನ್ ಮಾಡುತ್ತಿರಲಿಲ್ಲ, 'ಕಾಲ್' ಮೆಸೇಜ್ ಕಳಿಸ್ತಿದ್ರು ಯಾಕೆ?
ಬೆಂಗಳೂರಿನ ವಾರ್ಡ್ಗೆ ಅಪ್ಪು ಹೆಸರಿಡುವಂತೆ ಮನವಿ
ಬೆಂಗಳೂರಿನ ವಾರ್ಡ್ಗೆ ಕರ್ನಾಟಕ ರತ್ನ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಹೆಸರನ್ನು ಇಡುವಂತೆ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ವಿಧಾನ ಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆಗೆ ಇಂದು (ಜುಲೈ 05) ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಎರಡು ವಾರ್ಡ್ಗಳು ವಿಂಗಡಣೆಯಾಗಿದೆ. ವಾರ್ಡ್ ನಂ 55 ಹಾಗೂ ವಾರ್ಡ್ ನಂ 54ಕ್ಕೆ ಕಾವೇರಿ ನಗರ ಹಾಗೂ ಜೈ ಮಾರುತಿ ನಗರ ಎಂದು ಹೆಸರಿಡಲಾಗಿದೆ. ಈ ವಾರ್ಡ್ಗಳಲ್ಲೊಂದಕ್ಕೆ ಡಾ. ಪುನೀತ್ ರಾಜ್ಕುಮಾರ್ ವಾರ್ಡ್ ಎಂದು ನಾಮಕರಣ ಮಾಡಬೇಕು ಎಂದು ಅಭಿಮಾನಿಗಳು ವಿಧಾನಸೌಧದ ನಗರಾಭಿವೃದ್ಧಿ ಇಲಾಖೆಗೆ ತೆರಳಿ ಮನವಿ ಮಾಡಿಕೊಂಡಿದ್ದಾರೆ.
ಪುನೀತ್ ಕೊನೆಯ ಸಿನಿಮಾ 'ಜೇಮ್ಸ್' ನಿರ್ಮಾಪಕ ಆಸ್ಪತ್ರೆಗೆ ದಾಖಲು: ಹೇಗಿದೆ ಸ್ಥಿತಿ?
ಮಹಾಲಕ್ಷ್ಮಿ ವಾರ್ಡ್ ಯಾಕೆ ಬೇಕು?
ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದಲ್ಲಿಯೇ ಡಾ. ರಾಜ್ಕುಮಾರ್, ಡಾ. ಪಾರ್ವತಮ್ಮ ರಾಜ್ಕುಮಾರ್ ಹಾಗೂ ಡಾ. ಪುನೀತ್ ರಾಜ್ಕುಮಾರ್ ಅವರ ಪುಣ್ಯಭೂಮಿ ಬರುತ್ತೆ. ಈ ಕಾರಣಕ್ಕೆ ಪುಣ್ಯಭೂಮಿಗೆ ಹೊಂದಿಕೊಂಡಂತಹ ವಾರ್ಡ್ಗಳು ವಿಂಗಡಣೆಯಾಗಿರುವುದರಿಂದ ಎರಡರಲ್ಲಿ ಒಂದಕ್ಕೆ ಡಾ. ಪುನೀತ್ ರಾಜ್ಕುಮಾರ್ ವಾರ್ಡ್ ಎಂದು ಹೆಸರಿಡಬೇಕು ಎಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.
ಜುಲೈ 8ರವರೆಗೆ ಆಕ್ಷೇಪಣೆ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಅಷ್ಟರೊಳಗೆ ಯಾರೂ ಆಕ್ಷೇಪಣೆ ವ್ಯಕ್ತ ಪಡಿಸದೇ ಹೋದರೆ, ಮಹಾಲಕ್ಷ್ಮಿಯ ಎರಡು ವಾರ್ಡ್ಗಳಲ್ಲಿ ಒಂದಕ್ಕೆ ಪುನೀತ್ ರಾಜ್ಕುಮಾರ್ ವಾರ್ಡ್ ಎಂದು ಹೆಸರಿಡುವ ಸಾಧ್ಯತೆ ಇದೆ.
ತಮಿಳು ನಟ ಆರ್ಯಗೆ ಪುನೀತ್ ಪ್ರಶಸ್ತಿ: ಅಪ್ಪು ಪತ್ನಿ ಅಶ್ವಿನಿ ಮುಂದೆ ಹೇಳಿದ್ದೇನು?
ನಿರಂತರ ಅಪ್ಪು ಅಭಿಮಾನಿಗಳಿಂದ ಮನವಿ
ಪುನೀತ್ ರಾಜ್ಕುಮಾರ್ ಅಭಿಮಾನಿಗಳು ನಾಳೆ( ಜುಲೈ 06) ಕೂಡ ಮನವಿ ಮಾಡಿಕೊಳ್ಳಲಿದ್ದಾರೆ. ಅಭಿಮಾನಿಗಳು ಗುಂಪಾಗಿ ಹೋಗಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಮತ್ತೆ ಮನವಿ ಮಾಡಿಕೊಳ್ಳಲಿದ್ದಾರೆ.
ಪುನೀತ್ ರಾಜ್ಕುಮಾರ್ ಬದುಕಿದ್ದಾಗ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ, ಸಾವಿರಾರು ರೋಗಿಗಳಿಗೆ ಪುನೀತ್ ರಾಜ್ಕುಮಾರ್ ಸಹಾಯ ಹಸ್ತ ನೀಡಿದ್ದರು. ಇದರಿಂದ ಮಹಾಲಕ್ಷ್ಮಿ ವಾರ್ಡ್ನ ಯಾವುದಾದ್ರೂ ಒಂದು ವಾರ್ಡ್ಗೆ ಡಾ. ಪುನೀತ್ ರಾಜ್ಕುಮಾರ್ ಹೆಸರನ್ನು ಇಡುವುದು ಮುಖ್ಯ ಎಂದು ಅಭಿಮಾನಿಗಳ ಅಭಿಪ್ರಾಯ.