Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ನಯನತಾರಾಗೆ ಅಭಿಮಾನಿಗಳಿಂದ ಮಂದಿರ
ತಮ್ಮ ನೆಚ್ಚಿನ ತಾರೆಗಳ ಹೆಸರಿನಲ್ಲಿ ಮಂದಿರ ಕಟ್ಟುವ ಪರಿಪಾಠ ತಮಿಳುನಾಡಿನಲ್ಲಿ ಬಹಳ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ. ಎಲ್ಲರೂ ತಮ್ಮ ನೆಚ್ಚಿನ ತಾರೆಗಳನ್ನು ಹೃದಯವೆಂಬ ಮಂದಿರದಲ್ಲಿ ಆರಾಧಿಸಿದರೆ, ತಮಿಳರು ಮಾತ್ರ ಮಂದಿರ ಕಟ್ಟಿ ಆರಾಧಿಸುವಷ್ಟು ಅಭಿಮಾನ ತೋರುತ್ತಾರೆ.
ಇದುವರೆಗೂ ನಟಿ ಖುಷ್ಬೂ ಹಾಗೂ ನಗ್ಮಾ ಅವರಿಗೆ ಮಂದಿರಗಳನ್ನು ನಿರ್ಮಿಸಿ ಪೂಜೆ, ಪುನಸ್ಕಾರ, ಅರ್ಚನೆ, ಅಷ್ಟೋತ್ತರ ಮಾಡುತ್ತಿದ್ದಾರೆ ಅಭಿಮಾನಿಗಳು. ಇದೀಗ ನಟಿ ನಯನತಾರಾ ಅವರಿಗೂ ಮಂದಿರ ನಿರ್ಮಿಸಲು ಹೊರಟಿದ್ದಾರೆ ಅವರ ಅಭಿಮಾನಿಗಳು.
ಆದರೆ ಅಭಿಮಾನಿಗಳ ಆಸೆಗೆ ನಯನತಾರಾ ತಣ್ಣೀರೆರಚಿದ್ದಾರೆ. ನಿಮ್ಮೆಲ್ಲರ ಪ್ರೀತಿ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ನನ್ನನ್ನು ನೀವೆಲ್ಲಾ ದೇವತೆಯಂತೆ ಆರಾಧಿಸುವುದು ಬೇಡ ಎಂದು ನಯವಾಗಿ ನಿರಾಕರಿಸಿದ್ದಾರೆ. ಸದ್ಯಕ್ಕೆ ಅಭಿಮಾನಿಗಳು ಸೈಲೆಂಟ್ ಆಗಿದ್ದಾರೆ.
ಅನುಭಾವಿ, ಸಮಾಜ ಸುಧಾರಕ, ಧಾರ್ಮಿಕ ಮುಖಂಡ, ಕ್ರಾಂತಿಕಾರ, ಕಾಯಕನಿಷ್ಠ ಬಸವಣ್ಣನವರು 12ನೇ ಶತಮಾನದಲ್ಲೇ ಹೇಳಲಿಲ್ಲವೇ, "ಉಳ್ಳವರು ಶಿವಾಲಯ ಮಾಡುವರು ನಾನೆನು ಮಾಡಲಿ ಬಡವನೆಯ್ಯಾ ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರಹೊನ್ನ ಕಳಸವಯ್ಯ ಸ್ಥಾವರಕಳಿವುಂಟು ಜಂಗಮಕ್ಕಳಿವಿಲ್ಲ".