Just In
Don't Miss!
- News
ಬೈಕ್ ಹತ್ತುವ ಮುನ್ನ ಈ ಭಯಾನಕ ಅಪಘಾತ ದೃಶ್ಯ ನೋಡಿ !
- Automobiles
ಅನಾವರಣವಾಯ್ತು 2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಎಸ್ ಬೈಕ್
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಜ್ವಲ್ ಮತ್ತು ವಿಜಯ್ ಸಿನಿಮಾಗಳ ವಾರ್: ವಾಣಿಜ್ಯ ಮಂಡಳಿ ಮೆಟ್ಟಿಲೇರಿದ ಗುರು ದೇಶಪಾಂಡೆ
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಡುವೆ ವಾರ್ ಶುರುವಾಗಿದೆ. ಅಂದರೆ ಪ್ರಜ್ವಲ್ ಅಭಿನಯದ ಜಂಟಲ್ ಮನ್ ಸಿನಿಮಾ ಮತ್ತು ವಿಜಯ್ ರಾಘವೇಂದ್ರ ಅಭಿನಯದ ಮಾಲ್ಗುಡಿ ಡೇಸ್ ಸಿನಿಮಾಗಳ ನಡುವೆ ಕಿತ್ತಾಟ ಪ್ರಾರಂಭವಾಗಿದೆ. ಈ ಎರಡು ಸಿನಿಮಾಗಳು ಒಂದೆ ದಿನ ಅಂದರೆ ಇದೆ ಶುಕ್ರವಾರ ತೆರೆಗೆ ಬರುತ್ತಿವೆ.
ಈ ಎರಡು ಸಿನಿಮಾಗೀಗ ಮುಖ್ಯ ಚಿತ್ರಮಂದಿರದ ಸಮಸ್ಯೆ ಎದುರಾಗಿದೆ. ಸಂತೋಷ್ ಥಿಯೇಟರ್ ಗಾಗಿ ಈ ಎರಡು ಸಿನಿಮಾಗಳ ನಡುವೆ ಫೈಟ್ ನಡೆಯುತ್ತಿದೆ. ಸಂತೋಷ್ ಚಿತ್ರಮಂದಿರದಲ್ಲಿ ಜಂಟಲ್ ಮನ್ ಸಿನಿಮಾ ರಿಲೀಸ್ ಮಾಡುವುದಾಗಿ ಮೊದಲೆ ಮಾತುಕತೆ ನಡೆಸಿ, ಚಿತ್ರಮಂದಿರ ಫಿಕ್ಸ್ ಮಾಡಿಕೊಂಡಿತ್ತು ಚಿತ್ರತಂಡ. ಚಿತ್ರಮಂದಿರದ ಮಾಲಿಕ ಅರುಣ್ ಜಯಣ್ಣ ಜೊತೆ ಚಿತ್ರತಂಡ ಮಾತನಾಡಿ ಕನ್ಫರ್ಮ್ ಮಾಡಿಕೊಂಡಿದ್ದರು.
ಈ ವಾರ ಕನ್ನಡದಲ್ಲಿ ಒಟ್ಟು 11 ಚಿತ್ರಗಳು ಬಿಡುಗಡೆ
ಆದರೆ ಚಿತ್ರಮಂದಿರದ ಮಾಲಿಕರು ಮಾಲ್ಗುಡಿ ಡೇಸ್ ಚಿತ್ರತಂಡದಿಂದ ಅಡ್ವಾನ್ಸ್ ಪಡೆದು ಚಿತ್ರಮಂದಿರವನ್ನು ಮಾಲ್ಗುಡಿ ಡೇಸ್ ಚಿತ್ರತಂಡಕ್ಕೆ ಬಿಟ್ಟುಕೊಟ್ಟಿದೆ ಎಂದು ಜಂಟಲ್ ಮನ್ ಸಿನಿಮಾದ ನಿರ್ಮಾಪಕ ಗುರುದೇಶಪಾಂಡೆ ದೂರಿದ್ದಾರೆ. ಅಲ್ಲದೆ ಗುರು ದೇಶಪಾಂಡೆ ಚಿತ್ರಮಂದಿರದ ಮಾಲಿಕರ ವಿರುದ್ಧ ಗರಂ ಆಗಿ ನ್ಯಾಯ ಒದಗಿಸಿಕೊಡುವಂತೆ ಚಲನಚಿತ್ರ ಮಂಡಳಿಯ ಮೆಟ್ಟಿಲೇರಿದ್ದಾರೆ.
ಜಂಟಲ್ ಮನ್ ಸಿನಿಮಾಗೆ ಜಡೇಶ್ ಕುಮಾರ್ ಹಂಪಿ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಗುರು ದೇಶಪಾಂಡೆ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ವಿಭಿನ್ನ ಕಥೆಯ ಮೂಲಕ ಕನ್ನಡ ಚಿತ್ರಾಭಿಮಾನಿಗಳ ಗಮನ ಸೆಳೆಯುತ್ತಿರುವ ಮಾಲ್ಗುಡಿ ಡೇಸ್ ಚಿತ್ರಕ್ಕೆ ಕಿಶೋರ್ ಮೂಡಬಿದರೆ ಆಕ್ಷನ್ ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.