Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಲದ ಹಣ ವಾಪಸ್ ನೀಡಿಲ್ಲ ಎಂದು ದ್ವಾರಕೀಶ್ ಮನೆಯಲ್ಲಿ ನಿರ್ಮಾಪಕರ ಗಲಾಟೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಮನೆಗೆ ನುಗ್ಗಿ ನಿರ್ಮಾಪಕರೊಬ್ಬರು ಗಲಾಟೆ ನಡೆಸಿದ ಘಟನೆ ವರದಿಯಾಗಿದೆ. ಈ ಬಗ್ಗೆ ಈಗಾಗಲೇ ಎಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೈನಾನ್ಸರ್ ಹಾಗೂ ನಿರ್ಮಾಪಕರಾಗಿರುವ ರಮೇಶ್ ಎಂಬುವವರ ಬಳಿ ದ್ವಾರಕೀಶ್ ಹಣ ಪಡೆದಿದ್ದರಂತೆ. 'ಆಯುಷ್ಮಾನ್ ಭವ' ಸಿನಿಮಾದ ನಿರ್ಮಾಣಕ್ಕಾಗಿ ರಮೇಶ್ ಬಳಿ ದ್ವಾರಕೀಶ್ ಸಾಲ ಪಡೆದಿದ್ದರು. ಈ ಹಣ ಮರುಪಾವತಿ ಮಾಡಿಲ್ಲ ಎಂದು ದ್ವಾರಕೀಶ್ ಮನೆಗೆ ಬಂದು ರಮೇಶ್ ಗಲಾಟೆ ಮಾಡಿದ್ದಾರೆ.
'ಆಯುಷ್ಮಾನ್ ಭವ' ಸಿನಿಮಾ ದೊಡ್ಡ ಮಟ್ಟದ ಪ್ರತಿಕ್ರಿಯೆ ಪಡೆಯಲಿಲ್ಲ. ಹಾಗಾಗಿ, ಸಿನಿಮಾದ ಗಳಿಕೆ ತೀರ ಕಡಿಮೆ ಆಗಿತ್ತು. ಇತ್ತ ಸಿನಿಮಾ ನಿರ್ಮಾಣಕ್ಕೆ ಪಡೆದ ಸಾಲ ಹಾಗೆಯೇ ಉಳಿಯಿತು. ಹಣ ಮರುಪಾವತಿ ಕೇಳಲು ಶುಕ್ರವಾರ ದ್ವಾರಕೀಶ್ ಮನೆಗೆ ರಮೇಶ್ ಬಂದರು. ಈ ವೇಳೆ ಇಬ್ಬರ ನಡುವೆ ಗಲಾಟೆ ಆಗಿದೆ.
ರಮೇಶ್ ಮತ್ತು ದ್ವಾರಕೀಶ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಜೊತೆಯಲ್ಲಿ ನಿರ್ಮಾಪಕ ಜಯಣ್ಣ ಕೂಡ ಸ್ಥಳದಲ್ಲಿ ಇದ್ದರು ಎನ್ನುವ ಮಾಹಿತಿ ಇದೆ.