Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಲದ ಹಣ ವಾಪಸ್ ನೀಡಿಲ್ಲ ಎಂದು ದ್ವಾರಕೀಶ್ ಮನೆಯಲ್ಲಿ ನಿರ್ಮಾಪಕರ ಗಲಾಟೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಮನೆಗೆ ನುಗ್ಗಿ ನಿರ್ಮಾಪಕರೊಬ್ಬರು ಗಲಾಟೆ ನಡೆಸಿದ ಘಟನೆ ವರದಿಯಾಗಿದೆ. ಈ ಬಗ್ಗೆ ಈಗಾಗಲೇ ಎಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೈನಾನ್ಸರ್ ಹಾಗೂ ನಿರ್ಮಾಪಕರಾಗಿರುವ ರಮೇಶ್ ಎಂಬುವವರ ಬಳಿ ದ್ವಾರಕೀಶ್ ಹಣ ಪಡೆದಿದ್ದರಂತೆ. 'ಆಯುಷ್ಮಾನ್ ಭವ' ಸಿನಿಮಾದ ನಿರ್ಮಾಣಕ್ಕಾಗಿ ರಮೇಶ್ ಬಳಿ ದ್ವಾರಕೀಶ್ ಸಾಲ ಪಡೆದಿದ್ದರು. ಈ ಹಣ ಮರುಪಾವತಿ ಮಾಡಿಲ್ಲ ಎಂದು ದ್ವಾರಕೀಶ್ ಮನೆಗೆ ಬಂದು ರಮೇಶ್ ಗಲಾಟೆ ಮಾಡಿದ್ದಾರೆ.
'ಆಯುಷ್ಮಾನ್ ಭವ' ಸಿನಿಮಾ ದೊಡ್ಡ ಮಟ್ಟದ ಪ್ರತಿಕ್ರಿಯೆ ಪಡೆಯಲಿಲ್ಲ. ಹಾಗಾಗಿ, ಸಿನಿಮಾದ ಗಳಿಕೆ ತೀರ ಕಡಿಮೆ ಆಗಿತ್ತು. ಇತ್ತ ಸಿನಿಮಾ ನಿರ್ಮಾಣಕ್ಕೆ ಪಡೆದ ಸಾಲ ಹಾಗೆಯೇ ಉಳಿಯಿತು. ಹಣ ಮರುಪಾವತಿ ಕೇಳಲು ಶುಕ್ರವಾರ ದ್ವಾರಕೀಶ್ ಮನೆಗೆ ರಮೇಶ್ ಬಂದರು. ಈ ವೇಳೆ ಇಬ್ಬರ ನಡುವೆ ಗಲಾಟೆ ಆಗಿದೆ.
ರಮೇಶ್ ಮತ್ತು ದ್ವಾರಕೀಶ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಜೊತೆಯಲ್ಲಿ ನಿರ್ಮಾಪಕ ಜಯಣ್ಣ ಕೂಡ ಸ್ಥಳದಲ್ಲಿ ಇದ್ದರು ಎನ್ನುವ ಮಾಹಿತಿ ಇದೆ.