Don't Miss!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಲದ ಹಣ ವಾಪಸ್ ನೀಡಿಲ್ಲ ಎಂದು ದ್ವಾರಕೀಶ್ ಮನೆಯಲ್ಲಿ ನಿರ್ಮಾಪಕರ ಗಲಾಟೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಮನೆಗೆ ನುಗ್ಗಿ ನಿರ್ಮಾಪಕರೊಬ್ಬರು ಗಲಾಟೆ ನಡೆಸಿದ ಘಟನೆ ವರದಿಯಾಗಿದೆ. ಈ ಬಗ್ಗೆ ಈಗಾಗಲೇ ಎಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೈನಾನ್ಸರ್ ಹಾಗೂ ನಿರ್ಮಾಪಕರಾಗಿರುವ ರಮೇಶ್ ಎಂಬುವವರ ಬಳಿ ದ್ವಾರಕೀಶ್ ಹಣ ಪಡೆದಿದ್ದರಂತೆ. 'ಆಯುಷ್ಮಾನ್ ಭವ' ಸಿನಿಮಾದ ನಿರ್ಮಾಣಕ್ಕಾಗಿ ರಮೇಶ್ ಬಳಿ ದ್ವಾರಕೀಶ್ ಸಾಲ ಪಡೆದಿದ್ದರು. ಈ ಹಣ ಮರುಪಾವತಿ ಮಾಡಿಲ್ಲ ಎಂದು ದ್ವಾರಕೀಶ್ ಮನೆಗೆ ಬಂದು ರಮೇಶ್ ಗಲಾಟೆ ಮಾಡಿದ್ದಾರೆ.
'ಆಯುಷ್ಮಾನ್ ಭವ' ಸಿನಿಮಾ ದೊಡ್ಡ ಮಟ್ಟದ ಪ್ರತಿಕ್ರಿಯೆ ಪಡೆಯಲಿಲ್ಲ. ಹಾಗಾಗಿ, ಸಿನಿಮಾದ ಗಳಿಕೆ ತೀರ ಕಡಿಮೆ ಆಗಿತ್ತು. ಇತ್ತ ಸಿನಿಮಾ ನಿರ್ಮಾಣಕ್ಕೆ ಪಡೆದ ಸಾಲ ಹಾಗೆಯೇ ಉಳಿಯಿತು. ಹಣ ಮರುಪಾವತಿ ಕೇಳಲು ಶುಕ್ರವಾರ ದ್ವಾರಕೀಶ್ ಮನೆಗೆ ರಮೇಶ್ ಬಂದರು. ಈ ವೇಳೆ ಇಬ್ಬರ ನಡುವೆ ಗಲಾಟೆ ಆಗಿದೆ.
ರಮೇಶ್ ಮತ್ತು ದ್ವಾರಕೀಶ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಜೊತೆಯಲ್ಲಿ ನಿರ್ಮಾಪಕ ಜಯಣ್ಣ ಕೂಡ ಸ್ಥಳದಲ್ಲಿ ಇದ್ದರು ಎನ್ನುವ ಮಾಹಿತಿ ಇದೆ.