Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಸಿಲು ಕುದುರೆ' ನಿರ್ಮಾಪಕ ಕುಮಾರ್ ಮೇಲೆ ರೇಪ್ ಕೇಸ್
'ಬಿಸಿಲು ಕುದುರೆ' ಚಿತ್ರದ ನಿರ್ಮಾಪಕ ಕುಮಾರ್ ಮೇಲೆ ಅತ್ಯಾಚಾರ ಯತ್ನದ ಆರೋಪ ಕೇಳಿಬಂದಿದೆ. ಶೂಟಿಂಗ್ ಗಾಗಿ ಶಿವಮೊಗ್ಗಕ್ಕೆ ತೆರಳಿದಾಗ ನಿರ್ಮಾಪಕ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಅಂತ ಆರೋಪಿಸಿ ಸಹ ನಟಿಯೊಬ್ಬರು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊಸಬರೆಲ್ಲಾ ಸೇರಿ ರೆಡಿಮಾಡುತ್ತಿರುವ 'ಬಿಸಿಲು ಕುದುರೆ' ಚಿತ್ರದ ಚಿತ್ರೀಕರಣ ಶಿವಮೊಗ್ಗದ ಸುಂದರ ತಾಣಗಳಲ್ಲಿ ಫಿಕ್ಸ್ ಆಗಿತ್ತು. ಮೇ 21 ರಂದು ಚಿತ್ರದ ನಾಯಕ-ನಾಯಕಿ ಸೇರಿದಂತೆ ಇಡೀ ಚಿತ್ರತಂಡ ಶಿವಮೊಗ್ಗಗೆ ಪಯಣ ಬೆಳೆಸಿತ್ತು.
ಇದೇ ಸಂದರ್ಭದಲ್ಲಿ ನಾಯಕಿಯ ಸ್ನೇಹಿತೆ ಪಾತ್ರ ನಿರ್ವಹಿಸುತ್ತಿದ್ದ ನಟಿ ಮೇಲೆ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ತನ್ನ ಪತಿಗೆ ವಿಷಯ ತಿಳಿಸಿದ ಸಹನಟಿ, ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿ ಬೆಂಗಳೂರಿಗೆ ಮರಳಿದ್ದಾರೆ. [ಅತ್ಯಾಚಾರಿಗಳ ಮೂಳೆ ಮುರೀತೀನಿ: ಅರ್ಜುನ್ ಸರ್ಜಾ]
ಅಲ್ಲದೇ, ಪ್ರಕರಣವನ್ನ ರಾಜ್ಯ ಮಹಿಳಾ ಆಯೋಗ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗಮನಕ್ಕೆ ತರಲು ಮುಂದಾಗಿದ್ದಾರೆ. ಹಿಂದಿ ಟಿವಿ ನಟಿಯರ ಮೇಲೆ ಕನ್ನಡ ಮತ್ತು ತೆಲುಗು ನಿರ್ಮಾಪಕರು ಅತ್ಯಾಚಾರ ಎಸಗಿರುವ ಸುದ್ದಿ ಇತ್ತೀಚೆಗಷ್ಟೇ ಬ್ರೇಕ್ ಆಗಿತ್ತು. ಅದರ ಬೆನ್ನಲ್ಲೇ ಕರುನಾಡಲ್ಲಿ ಇಂತಹ ಘಟನೆ ನಡೆದಿರುವುದು ಶೋಚನೀಯ. (ಏಜೆನ್ಸೀಸ್)