Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿ ತೆರೆಮೇಲೆ ಬರ್ತಿದೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 'ಮೂಕನ ಮಕ್ಕಳು'
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಒಂದಾಗಿರುವ ಮೂಕನ ಮಕ್ಕಳು ಈಗ ಸಿನಿಮಾ ರೂಪತಾಳಿ ಬೆಳ್ಳಿತೆರೆ ಮೇಲೆ ಬರಲು ಸಿದ್ಧವಾಗಿದೆ. ಮೂಕನ ಮಕ್ಕಳು ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಇದೀಗ ಸಿನಿಮಾ ಮೂಲಕ ನೋಡಿ ಎಂಜಾಯ್ ಮಾಡಬಹುದು.
ಅಂದಹಾಗೆ ಈ ಸಿನಿಮಾವನ್ನು ತೆರೆಮೇಲೆ ತರುವ ಪ್ರಯತ್ನ ಮಾಡಿದ್ದಾರೆ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರೀಯರಾಗಿರುವ ಮೈಸೂರು ಮಂಜು. ಚಿತ್ರದಲ್ಲಿ ನವ ನಟ ಮಂಜುಕ್ರಿಷ್ ಮೊದಲ ಬಾರಿಗೆ ಬಣ್ಣಹಚ್ಚಿದ್ದಾರೆ.
ಈಗಾಗಲೇ ಕೋಲ್ಕತ್ತಾ ಫಿಲ್ಮ ಫೆಸ್ಟಿವಲ್ ನಲ್ಲಿ ಪ್ರದರ್ಶನಗೊಂಡು ಉತ್ತಮ ಪರಿಸರ ಚಿತ್ರ ಮತ್ತು ಉತ್ತಮ ಸಹ ನಟ ಪ್ರಶಸ್ತಿ ಪಡೆದುಕೊಂಡಿದೆ. ಇನ್ನು ಯು ಕೆಯಲ್ಲಿ ಎರಡು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. ಪನೋರಮಾ ಸೇರಿದಂತೆ ವಿವಿಧ ಚಿತ್ರೋತ್ಸವಗಳಲ್ಲಿ ಪ್ರದರ್ಶನಕ್ಕೆ ಸಜ್ಜಾಗಿದೆ.
Recommended Video
ಈಗಾಗಲೇ ಅನೇಕರಿಂದ ಮೆಚ್ಚುಗೆಗೆ ಪಾತ್ರವಾಗಿರುವ ಮೂಕನ ಮಕ್ಕಳು ಸಿನಿಮಾ ಮುಂದಿನ ವರ್ಷ ಚಿತ್ರಮಂದಿರಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಕೃತಿ ಜನಪ್ರಿಯತೆ ಪಡೆದುಕೊಂಡ ಹಾಗೆ ಸಿನಿಮಾಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಾ ಎಂದು ಕಾದು ನೋಡಬೇಕು.