Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಗಂಗಾ ಮಠಕ್ಕೆ 5 ಲಕ್ಷ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ
ತ್ರಿವಿಧ ದಾಸೋಹಕ್ಕೆ ಹೆಸರುವಾಸಿ ತುಮಕೂರಿನ ಸಿದ್ಧಗಂಗ ಮಠ. ಕೋಟ್ಯಾಂತರ ಮಕ್ಕಳಿಗೆ ಅನ್ನ, ಅಕ್ಷರ, ಜ್ಞಾನವನ್ನ ನೀಡುತ್ತಿರುವ ಈ ಮಠ ಜಗತ್ತಿನಲ್ಲೇ ವಿಶೇಷ ಸ್ಥಾನವನ್ನ ಹೊಂದಿದೆ. ಡಾ ಶಿವಕುಮಾರಸ್ವಾಮೀಜಿ ನಿಧನದ ನಂತರ ಅನೇಕ ಮಂದಿ ಸಿದ್ಧಗಂಗಾ ಮಠಕ್ಕೆ ಹಲವು ರೀತಿ ನೆರವು ನೀಡುತ್ತಿದ್ದಾರೆ.
ಇದೀಗ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ, ಪದಾದಿಕಾರಿ ಹಾಗೂ ಸದಸ್ಯರು ಸಿದ್ಧಗಂಗೆಯ ಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
ಸಿದ್ಧಗಂಗಾ ಮಠದ ಮಹತ್ವದ ಕೆಲಸಕ್ಕೆ ಜೊತೆಯಾದ 'ಯಜಮಾನ'
ಸಿದ್ಧಗಂಗೆಯ ಶ್ರೀಗಳಾದ ಸಿದ್ಧಲಿಂಗ ಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಚೇಂಬರ್ ಸದಸ್ಯರು ಮಠದ ಅನ್ನದಾಸೋಹಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.
'ದೊಡ್ಮನೆ' ನಟರ ಮೇಲಿತ್ತು ಸಿದ್ಧಗಂಗಾ ಶ್ರೀಗಳ ಆಶೀರ್ವಾದ
ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಚೇಂಬರ್ ನ ಪದಾಧಿಕಾರಿಗಳಾದ ಕೆ.ಎಂ.ವೀರೇಶ್, ಭಾಮಾ ಹರೀಶ್, ಕರಿಸುಬ್ಬು, ಕೆ.ವಿ.ಚಂದ್ರಶೇಖರ್, ಜಯರಾಜ್, ಎನ್.ಎಂ.ಸುರೇಶ್ ಕೂಡ ಭಾಗಿಯಾಗಿದ್ದರು.