Don't Miss!
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಮತ್ತು ಕೇರಳ ಜನತೆಗೆ ನೆರವಾದ ಕನ್ನಡ ಫಿಲ್ಮ್ ಚೇಂಬರ್
ಕೊಡಗು ಮತ್ತು ಕೇರಳದಲ್ಲಿ ಉಂಟಾದ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕನ್ನಡ ಚಿತ್ರರಂಗ ಸಹಾಯ ಹಸ್ತ ಚಾಚಿದೆ.
ಈಗಾಗಲೇ ನಟ ಶಿವರಾಜ್ ಕುಮಾರ್ ಕೊಡಗಿಗೆ 10 ಲಕ್ಷ, ಪ್ರಕಾಶ್ ರೈ 5 ಲಕ್ಷ, ಪುನೀತ್ ರಾಜ್ ಕುಮಾರ್ ಕೇರಳಗೆ 5 ಲಕ್ಷ ನೀಡಿ ನೆರವಾಗಿದ್ದಾರೆ. ಅದರ ಜೊತೆಗೆ ದರ್ಶನ್, ಸುದೀಪ್, ಗಣೇಶ್, ಯಶ್ ಅಭಿಮಾನಿಗಳು ಅಗತ್ಯ ವಸ್ತುಗಳನ್ನ ಪೂರೈಸಿ ಮಿಡಿದಿದ್ದಾರೆ.
ಇದೀಗ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕೊಡಗು ಹಾಗೂ ಕೇರಳ ಜನರ ಪುನರ್ವಸತಿ ನಿರ್ಮಾಣಕ್ಕಾಗಿ ಹಣದ ನೆರವು ನೀಡಿದೆ.
ಸಿ.ಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ನೀಡಿದ ನಟ ಶಿವರಾಜ್ ಕುಮಾರ್
ಕೊಡಗು ಜನತೆಗಾಗಿ ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 20 ಲಕ್ಷ ಹಾಗೂ ಕೇರಳ ಪ್ರವಾಹ ಪೀಡಿತರ ನಿಧಿಗೆ 5 ಲಕ್ಷ ಹಣ ನೀಡುವ ಮೂಲಕ ಸ್ಯಾಂಡಲ್ ವುಡ್ ಫಿಲ್ಮ್ ಚೇಂಬರ್ ಕಂಬನಿ ಮಿಡಿದಿದೆ.
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ಈ ಬಗ್ಗೆ ವಾಣಿಜ್ಯ ಮಂಡಳಿಯಲ್ಲಿಂದು ಸಭೆ ಸೇರಿದ್ದ ವಾಣಿಜ್ಯ ಮಂಡಳಿಯ ಸದಸ್ಯರು ಈ ನಿರ್ಧಾರವನ್ನ ಘೋಷಿಸಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೆಗೌಡ್ರು, ನಿರ್ಮಾಪಕ ಕೆ ಮಂಜು, ರಾಕ್ ಲೈನ್ ವೆಂಕಟೇಶ್, ಕರಿಸುಬ್ಬು ಸೇರಿದಂತೆ ಪದಾದಿಕಾರಿಗಳು ಭಾಗಿಯಾಗಿದ್ದರು.