Don't Miss!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಮತ್ತು ಕೇರಳ ಜನತೆಗೆ ನೆರವಾದ ಕನ್ನಡ ಫಿಲ್ಮ್ ಚೇಂಬರ್
ಕೊಡಗು ಮತ್ತು ಕೇರಳದಲ್ಲಿ ಉಂಟಾದ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕನ್ನಡ ಚಿತ್ರರಂಗ ಸಹಾಯ ಹಸ್ತ ಚಾಚಿದೆ.
ಈಗಾಗಲೇ ನಟ ಶಿವರಾಜ್ ಕುಮಾರ್ ಕೊಡಗಿಗೆ 10 ಲಕ್ಷ, ಪ್ರಕಾಶ್ ರೈ 5 ಲಕ್ಷ, ಪುನೀತ್ ರಾಜ್ ಕುಮಾರ್ ಕೇರಳಗೆ 5 ಲಕ್ಷ ನೀಡಿ ನೆರವಾಗಿದ್ದಾರೆ. ಅದರ ಜೊತೆಗೆ ದರ್ಶನ್, ಸುದೀಪ್, ಗಣೇಶ್, ಯಶ್ ಅಭಿಮಾನಿಗಳು ಅಗತ್ಯ ವಸ್ತುಗಳನ್ನ ಪೂರೈಸಿ ಮಿಡಿದಿದ್ದಾರೆ.
ಇದೀಗ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕೊಡಗು ಹಾಗೂ ಕೇರಳ ಜನರ ಪುನರ್ವಸತಿ ನಿರ್ಮಾಣಕ್ಕಾಗಿ ಹಣದ ನೆರವು ನೀಡಿದೆ.
ಸಿ.ಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ನೀಡಿದ ನಟ ಶಿವರಾಜ್ ಕುಮಾರ್
ಕೊಡಗು ಜನತೆಗಾಗಿ ಕರ್ನಾಟಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 20 ಲಕ್ಷ ಹಾಗೂ ಕೇರಳ ಪ್ರವಾಹ ಪೀಡಿತರ ನಿಧಿಗೆ 5 ಲಕ್ಷ ಹಣ ನೀಡುವ ಮೂಲಕ ಸ್ಯಾಂಡಲ್ ವುಡ್ ಫಿಲ್ಮ್ ಚೇಂಬರ್ ಕಂಬನಿ ಮಿಡಿದಿದೆ.
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ಈ ಬಗ್ಗೆ ವಾಣಿಜ್ಯ ಮಂಡಳಿಯಲ್ಲಿಂದು ಸಭೆ ಸೇರಿದ್ದ ವಾಣಿಜ್ಯ ಮಂಡಳಿಯ ಸದಸ್ಯರು ಈ ನಿರ್ಧಾರವನ್ನ ಘೋಷಿಸಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಚಿನ್ನೆಗೌಡ್ರು, ನಿರ್ಮಾಪಕ ಕೆ ಮಂಜು, ರಾಕ್ ಲೈನ್ ವೆಂಕಟೇಶ್, ಕರಿಸುಬ್ಬು ಸೇರಿದಂತೆ ಪದಾದಿಕಾರಿಗಳು ಭಾಗಿಯಾಗಿದ್ದರು.