twitter
    For Quick Alerts
    ALLOW NOTIFICATIONS  
    For Daily Alerts

    ಸಾಹಿತಿ ಬರಗೂರು ಅವರಿಗೆ ವಾಣಿಜ್ಯ ಮಂಡಳಿಯಿಂದ ಸನ್ಮಾನ

    |

    82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪನವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಗೌರವವಿಸಲಾಗಿದೆ.

    ಇಂದು ಬೆಳಿಗ್ಗೆ ಶಿವಾನಂದ ವೃತ್ತದಲ್ಲಿರುವ ವಾಣಿಜ್ಯ ಮಂಡಳಿ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು, ವಿತರಕ ಕೆ.ವಿ ಚಂದ್ರಶೇಖರ್, ನಿರ್ಮಾಪಕ ಎನ್ ಎಂ ಸುರೇಶ್ ಹಾಗೂ ವಾಣಿಜ್ಯ ಮಂಡಳಿಯ ಪದಾದಿಕಾರಿಗಳು ಭಾಗಿಯಾಗಿದ್ದರು.

    Film Chamber Honored to Dr Baraguru Ramachandrappa

    ಈ ವೇಳೆ ಡಾ.ಬರಗೂರು ರಾಮಚಂದ್ರಪ್ಪನವರಿಗೆ ವಾಣಿಜ್ಯ ಮಂಡಳಿ ವತಿಯಿಂದ ಬೆಳ್ಳಿತಟ್ಟೆ ನೀಡಿ ಗೌರವಿಸಲಾಯಿತು. ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಚಿತ್ರರಂಗದ ಬಗ್ಗೆ ಚರ್ಚಿಸಲು ಮುಖ್ಯ ವೇದಿಕೆ ಕಲ್ಪಿಸಿಕೊಡಬೇಕಾಗಿ ವಾಣಿಜ್ಯ ಮಂಡಳಿಯ ಪರವಾಗಿ ಮನವಿ ಮಾಡಲಾಯಿತು.

    82ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಡಿಸೆಂಬರ್ 2 ರಿಂದ 4 ರ ವರೆಗೂ ರಾಯಚೂರಿನಲ್ಲಿ ನಡೆಯಲಿದೆ.

    English summary
    KFCC has felicitated Dr.Baraguru Ramachandrappa today (October 24th) for being President of 82th Kannada Sahitya Sammelana.
    Monday, October 24, 2016, 16:07
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X