Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಸರಘಟ್ಟದಲ್ಲಿಯೇ ನಿರ್ಮಾಣವಾಗಲಿದೆ ಫಿಲ್ಮ್ ಸಿಟಿ: ಡಿಸಿಎಂ ಅಶ್ವತ್ಥ್ ನಾರಾಯಣ್
ಕರ್ನಾಟಕದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದು ಎಷ್ಟು ವರ್ಷಗಳ ಕನಸು. ಫಿಲ್ಮ್ ಸಿಟಿ ನಿರ್ಮಾಣದ ವಿಚಾರ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿ ವಿಶ್ವ ದರ್ಜೆಯ ಫಿಲ್ಮ್ ಸಿಟಿಯನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.
Recommended Video
ಈ ಮೊದಲು ಫಿಲ್ಮ್ ಸಿಟಿಯನ್ನು ಹೆಸರಘಟ್ಟದಲ್ಲಿ, ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮೈಸೂರು, ಎಚ್ ಡಿ ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ರಾಮನಗರ, ಕೊನೆಗೆ ಕನಕಪುರ ರಸ್ತೆಯ ರೋರಿಚ್ ಎಸ್ಟೇಟ್ ಹೀಗೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಅಂತ ಫಿಲ್ಮ್ ಸಿಟಿ ನಿರ್ಮಾಣದ ಜಾಗ ಬದಲಾಗುತ್ತಲೆ ಇದೆ. ಆದರೆ ಕೊನೆಯದಾಗಿ ಬೆಂಗಳೂರಿನ ಹೊರವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.
ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
ಇದೀಗ ಸರ್ಕಾರ ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ನಿರ್ಧಾರ ಮಾಡಿದೆ. ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿತ್ರರಂಗದ ಪುನಶ್ಚೇತನ ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಲು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಮಯದಲ್ಲಿ ಅಶ್ವತ್ಥ್ ನಾರಾಯಣ್ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.
"ಫಿಲ್ಮ್ ಸಿಟಿ ರೋರಿಚ್ ಎಸ್ಟೇಟ್ ನಲ್ಲಿ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಹೆಸರಘಟ್ಟದಲ್ಲಿ ಮಾಡುವ ಪ್ರಯತ್ನ ನಡೆಯುತ್ತಿದೆ. ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು ಇದರಲ್ಲಿ ಸಿನಿಮಾರಂಗಕ್ಕೆ 150 ಎಕರೆ ಭೂಮಿ ನೀಡುವಂತೆ ಒತ್ತಾಯ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿದೆ. ತ್ವರಿತವಾಗಿ ಇದನ್ನು ಬಗೆಹರಿಸಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ಸಿಗಲಿದೆ" ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆಯಡಿ ತಂದು ಸರ್ಕಾರದ ಸವಲತ್ತುಗಳು ಅವರಿಗೂ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.