Don't Miss!
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
25 ವರ್ಷಗಳ ನಂತರ ಎತ್ತಿನಗಾಡಿ ಓಡಿಸಿ ಸಂತಸಪಟ್ಟ ಗುರುದೇಶಪಾಂಡೆ
ಹಳ್ಳಿಯಿಂದ ನಗರಕ್ಕೆ ಬಂದಮೇಲೆ ಅದೇಷ್ಟೋ ಒಳ್ಳೆಯ ಅನುಭವಗಳನ್ನು ಮಿಸ್ ಮಾಡಿಕೊಳ್ಳುತ್ತೇವೆ. ಎತ್ತಿಗಾಡಿ, ಟಿವಿಎಸ್ ಬೈಕ್, ಸೈಕಲ್ ಸವಾರಿ ಹೀಗೆ ಎಲ್ಲವನ್ನು ಕಳೆದುಕೊಳ್ಳುವ ಜನರು ಬಸ್, ಕಾರು, ಆಟೋದಲ್ಲಿ ಓಡಾಡುತ್ತಾರೆ.
ಮತ್ತೆ ಹಳ್ಳಿಯ ಜೀವನಕ್ಕೆ ಹಿಂತಿರುಗಿದ ಆ ಸಂತೋಷವೇ ಬೇರೆ. ಅದನ್ನು ಬರಿ ಮಾತನಲ್ಲಿ ಹೇಳಲು ಸಾಧ್ಯವಾಗಲ್ಲ. ಅದನ್ನು ಅನುಭವಿಸಬೇಕು. ಇದೀಗ, ಕನ್ನಡದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾದ ಗುರುದೇಶಪಾಂಡೆ ಸುಮಾರು 25 ವರ್ಷದ ನಂತರ ಎತ್ತಿನಗಾಡಿ ಸವಾರಿ ಮಾಡಿದ್ದಾರೆ.
ರೈತನಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿದ ನಿರ್ದೇಶಕ ಪವನ್ ಒಡೆಯರ್
ಈ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ನಿರ್ದೇಶಕರು ಸಂತಸ ವ್ಯಕ್ತಪಡಿಸಿದ್ದಾರೆ. ''ಸಿಟಿಯಲ್ಲಿ ಟ್ರಾಫಿಕ್ ಪೊಲ್ಲ್ಯೂಷನ್ ಬೈಕ್ ಕಾರ್ ಗಳ ನಡುವೆ ನಮ್ಮ ಎತ್ತಿನಗಾಡಿ ಓಡಿಸುವ ಮಜಾನೇ ಬೇರೆ. 25 ವರ್ಷಗಳ ಹಿಂದೆ ನಾನು ಊರಿಂದ ಬೆಂಗಳೂರಿಗೆ ಬಂದ ನಂತರ ನಮ್ಮ ಊರು ಎತ್ತಿನಗಾಡಿ ಎತ್ತು ಕರು ಪ್ರತಿಯೊಂದನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. 25 ವರ್ಷಗಳ ನಂತರ ಎತ್ತಿನ ಗಾಡಿ ಓಡಿಸಿದ ಅನುಭವವಂತೂ ಅದ್ಭುತ ಪದಗಳಲ್ಲಿ ವರ್ಣಿಸಲು ಆಗದು'' ಎಂದು ಪೋಸ್ಟ್ ಹಾಕಿದ್ದಾರೆ.
ಇತ್ತೀಚಿಗಷ್ಟೆ ನಿರ್ದೇಶಕ ಪವನ್ ಒಡೆಯರ್ ತಮ್ಮ ತೋಟದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದರು. ಆ ವಿಡಿಯೋವನ್ನು ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ಹಳ್ಳಿ ಜೀವನ ಮಿಸ್ ಮಾಡಿಕೊಳ್ಳುವವ ಜನರಿಗೆ ಇದೆಲ್ಲ ಬಹಳ ಖುಷಿ ಕೊಡುತ್ತದೆ.
ಸಿಟಿಯಲ್ಲಿ ಟ್ರಾಫಿಕ್ ಪೊಲ್ಲ್ಯೂಷನ್ ಬೈಕ್ ಕಾರ್ ಗಳ ನಡುವೆ ನಮ್ಮ ಎತ್ತಿನಗಾಡಿ ಓಡಿಸುವ ಮಜಾನೇ ಬೇರೆ 25 ವರ್ಷಗಳ ಹಿಂದೆ ನಾನು ಊರಿಂದ ಬೆಂಗಳೂರಿಗೆ ಬಂದ ನಂತರ ನಮ್ಮ ಊರು ಎತ್ತಿನಗಾಡಿ ಎತ್ತು ಕರು ಪ್ರತಿಯೊಂದನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ 25 ವರ್ಷಗಳ ನಂತರ ಎತ್ತಿನ ಗಾಡಿ ಓಡಿಸಿದ ಅನುಭವವಂತೂ ಅದ್ಭುತ ಪದಗಳಲ್ಲಿ ವರ್ಣಿಸಲು ಆಗದು pic.twitter.com/VwDkOfmrCr
— Guru Deshpande (@deshpandeguru1) October 11, 2020
Recommended Video
ಅಂದ್ಹಾಗೆ, ರಾಜಾಹುಲಿ, ಪಡ್ಡೆಹುಲಿ ಅಂತಹ ಚಿತ್ರಗಳನ್ನಿ ನಿರ್ದೇಶಿಸಿದ್ದ ಗುರುದೇಶಪಾಂಡೆ ಕೊನೆಯದಾಗಿ ಪ್ರಜ್ವಲ್ ದೇವರಾಜ್ ನಟನೆಯ 'ಜಂಟಲ್ಮ್ಯಾನ್' ಚಿತ್ರವನ್ನು ನಿರ್ಮಿಸಿದ್ದರು.