Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ಗಣ್ಯರಿಂದ ಕಾರ್ಮಿಕ ಸಚಿವರ ಭೇಟಿ, ಸಹಾಯಕ್ಕೆ ಮನವಿ
ಕೊರೊನಾ ದಿಂದ ರಾಜ್ಯ ತತ್ತರಿಸಿದ್ದು, ಬಡವರು, ದಿನಗೂಲಿ ನೌಕರರು ಹೊತ್ತಿನ ಊಟಕ್ಕೆ ಕಷ್ಟಪಡುವಂತಹಾ ಸ್ಥಿತಿ ನಿರ್ಮಾಣವಾಗಿದೆ.
ಸಿನಿಮಾ ಉದ್ಯಮ ಸಹ ಕೊರೊನಾ ಹೊಡೆತಕ್ಕೆ ಜರ್ಜರಿತವಾಗಿದ್ದು, ಸಾಲ ಪಡೆದ ನಿರ್ಮಾಪಕರು ಬಡ್ಡಿ ತಲೆ ಮೇಲೆ ಹೊತ್ತುಕೊಂಡಿದ್ದರೆ. ಸಿನಿಮಾ ಚಿತ್ರೀಕರಣವನ್ನೇ ನಂಬಿಕೊಂಡಿದ್ದ ದಿನಗೂಲಿ ನೌಕರರ ಪಾಡು ಹೇಳ ತೀರದು.
ಇಂಥಹಾ ಸಂದಿಗ್ಧ ಸಮಯದಲ್ಲಿ ಸಿನಿಮಾ ಉದ್ಯಮದ ಪ್ರಮುಖರು ಸರ್ಕಾರದ ನೆರವನ್ನು ಬೇಡಿದ್ದು, ಇಂದು ಸಿನಿಮಾದ ಕೆಲವು ಸಂಘ-ಸಂಸ್ಥೆಗಳ ಮುಖಂಡರು, ಕಾರ್ಮಿಕ ಸಚಿವರನ್ನು ಭೇಟಿಯಾಗಿ ಮನವಿಗಳನ್ನು ಸಲ್ಲಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಒಕ್ಕೂಟದ ಕಾರ್ಯದರ್ಶಿ ರವೀಂದ್ರ ಇನ್ನೂ ಹಲವು ಪ್ರಮುಖರು ಇಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ದಿನಸಿ, ತರಕಾರಿಗಳು ಇನ್ನಿತರ ಅಗತ್ಯ ಸಾಮಗ್ರಿಗಳ ನೆರವನ್ನು ಸಿನಿಮಾದ ದಿನಗೂಲಿ ನೌಕರರಿಗೆ ವಿಸ್ತರಿಸಿರೆಂದು ಗಣ್ಯರು ಕಾರ್ಮಿಕ ಸಚಿವರನ್ನು ಮನವಿ ಮಾಡಿದರು.
ಇಷ್ಟೆ ಅಲ್ಲದೆ, ಸಿನಿಮಾ ಉದ್ಯಮದ ಪ್ರಸ್ತುತ ಸ್ಥಿತಿ, ಅನುಭವಿಸಿರುವ ನಷ್ಟ, ಮುಂದೆ ಆಗಬೇಕಾಗಿರುವ ಕಾರ್ಯಗಳು ಇನ್ನೂ ಹಲವಾರು ವಿಷಯಗಳ ಬಗ್ಗೆ ಈ ಪ್ರಮುಖರು ಸಚಿವರ ಬಳಿ ಚರ್ಚೆ ನಡೆಸಿದ್ದಾರೆ.