Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ಗಣ್ಯರಿಂದ ಕಾರ್ಮಿಕ ಸಚಿವರ ಭೇಟಿ, ಸಹಾಯಕ್ಕೆ ಮನವಿ
ಕೊರೊನಾ ದಿಂದ ರಾಜ್ಯ ತತ್ತರಿಸಿದ್ದು, ಬಡವರು, ದಿನಗೂಲಿ ನೌಕರರು ಹೊತ್ತಿನ ಊಟಕ್ಕೆ ಕಷ್ಟಪಡುವಂತಹಾ ಸ್ಥಿತಿ ನಿರ್ಮಾಣವಾಗಿದೆ.
ಸಿನಿಮಾ ಉದ್ಯಮ ಸಹ ಕೊರೊನಾ ಹೊಡೆತಕ್ಕೆ ಜರ್ಜರಿತವಾಗಿದ್ದು, ಸಾಲ ಪಡೆದ ನಿರ್ಮಾಪಕರು ಬಡ್ಡಿ ತಲೆ ಮೇಲೆ ಹೊತ್ತುಕೊಂಡಿದ್ದರೆ. ಸಿನಿಮಾ ಚಿತ್ರೀಕರಣವನ್ನೇ ನಂಬಿಕೊಂಡಿದ್ದ ದಿನಗೂಲಿ ನೌಕರರ ಪಾಡು ಹೇಳ ತೀರದು.
ಇಂಥಹಾ ಸಂದಿಗ್ಧ ಸಮಯದಲ್ಲಿ ಸಿನಿಮಾ ಉದ್ಯಮದ ಪ್ರಮುಖರು ಸರ್ಕಾರದ ನೆರವನ್ನು ಬೇಡಿದ್ದು, ಇಂದು ಸಿನಿಮಾದ ಕೆಲವು ಸಂಘ-ಸಂಸ್ಥೆಗಳ ಮುಖಂಡರು, ಕಾರ್ಮಿಕ ಸಚಿವರನ್ನು ಭೇಟಿಯಾಗಿ ಮನವಿಗಳನ್ನು ಸಲ್ಲಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಒಕ್ಕೂಟದ ಕಾರ್ಯದರ್ಶಿ ರವೀಂದ್ರ ಇನ್ನೂ ಹಲವು ಪ್ರಮುಖರು ಇಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ದಿನಸಿ, ತರಕಾರಿಗಳು ಇನ್ನಿತರ ಅಗತ್ಯ ಸಾಮಗ್ರಿಗಳ ನೆರವನ್ನು ಸಿನಿಮಾದ ದಿನಗೂಲಿ ನೌಕರರಿಗೆ ವಿಸ್ತರಿಸಿರೆಂದು ಗಣ್ಯರು ಕಾರ್ಮಿಕ ಸಚಿವರನ್ನು ಮನವಿ ಮಾಡಿದರು.
ಇಷ್ಟೆ ಅಲ್ಲದೆ, ಸಿನಿಮಾ ಉದ್ಯಮದ ಪ್ರಸ್ತುತ ಸ್ಥಿತಿ, ಅನುಭವಿಸಿರುವ ನಷ್ಟ, ಮುಂದೆ ಆಗಬೇಕಾಗಿರುವ ಕಾರ್ಯಗಳು ಇನ್ನೂ ಹಲವಾರು ವಿಷಯಗಳ ಬಗ್ಗೆ ಈ ಪ್ರಮುಖರು ಸಚಿವರ ಬಳಿ ಚರ್ಚೆ ನಡೆಸಿದ್ದಾರೆ.