Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಪ್ರಿಯರಿಗೆ ಮತ್ತೆ ನಿರಾಸೆ: ಸೆಪ್ಟೆಂಬರ್ ಅಂತ್ಯದವರೆಗೂ ಚಿತ್ರಮಂದಿರ ಲಾಕ್!
ಲಾಕ್ಡೌನ್ ಹಿನ್ನೆಲೆ ಐದಾರು ತಿಂಗಳಿಂದ ಮುಚ್ಚಲ್ಪಟ್ಟಿರುವ ಚಿತ್ರಮಂದಿರಗಳು ಹಾಗೂ ಮಲ್ಟಿಫ್ಲೆಕ್ಸ್ಗಳ ಇನ್ನೂ ಒಂದು ತಿಂಗಳು ತೆರೆಯುವಂತಿಲ್ಲ. ನಿನ್ನೆಯಷ್ಟೇ (ಆಗಸ್ಟ್ 29) ಕೇಂದ್ರದಿಂದ ಅನ್ಲಾಕ್4 ಮಾರ್ಗಸೂಚಿ ಪ್ರಕಟವಾಗಿದ್ದು, ಸೆಪ್ಟೆಂಬರ್ ಅಂತ್ಯದವರೆಗೂ ಚಿತ್ರಮಂದಿರ ತೆರೆಯದಂತೆ ಸೂಚಿಸಿದೆ. ಈ ಮೂಲಕ ಕನ್ನಡ ಕಲಾಭಿಮಾನಿಗಳು ಹಾಗೂ ಥಿಯೇಟರ್ ಮಾಲಿಕರು ನಿರಾಸೆಯಾಗಿದ್ದಾರೆ.
Recommended Video
150ಕ್ಕೂ ಹೆಚ್ಚು ದಿನಗಳಿಂದ ಚಿತ್ರಮಂದಿರ ಮುಚ್ಚಿರುವುದರಿಂದ ಸಹಜವಾಗಿ ಥಿಯೇಟರ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಬಿಡುಗಡೆ ಇಲ್ಲದೇ ನಿರ್ಮಾಪಕರು ಸಹ ಕಂಗಾಲಾಗಿದ್ದಾರೆ. ಕೆಲವು ಚಿತ್ರಗಳು ಮಾತ್ರ ಆನ್ಲೈನ್ ಬಿಡುಗಡೆ ಕಂಡಿದೆ.
ಅನ್ಲಾಕ್ 4 ಮಾರ್ಗಸೂಚಿ: ಶಾಲೆ, ಚಿತ್ರಮಂದಿರ ತೆರೆಯಲು ಒಪ್ಪಿಗೆ ಇಲ್ಲ
ಚಿತ್ರಮಂದಿರ ತೆರೆಯಲು ಅನುಮತಿ ನೀಡಿ ಎಂದು ಒತ್ತಾಯಿಸಿ ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ವಿನಂತಿಸಿಕೊಂಡಿತ್ತು.
ರಾಜ್ಯ ಸರ್ಕಾರ ಸಹ ಸೆಪ್ಟೆಂಬರ್ ತಿಂಗಳಿನಿಂದ ಚಿತ್ರಮಂದಿರ ತೆರೆಯಲು ಅನುಮತಿ ನೀಡುವ ಬಗ್ಗೆ ಸಕಾರಾತ್ಮಕ ನಿರ್ಧಾರಕ್ಕೆ ಬಂದಿತ್ತು. ಆದರೆ, ಕೇಂದ್ರ ಮಾರ್ಗಸೂಚಿ ಮತ್ತೆ ನಿರಾಸೆ ಮೂಡಿಸಿದೆ.
ಆರಂಭಿಕ ಹಂತದಲ್ಲಿ ಮಲ್ಟಿಫ್ಲೆಕ್ಸ್ ಗಳಿಗೆ ಅವಕಾಶ ಸಿಗವ ಸಾಧ್ಯತೆ ಇದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಕ್ಕೂ ಅನುಮತಿ ಸಿಕ್ಕಿಲ್ಲ.