Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಪ್ರಿಯರಿಗೆ ಮತ್ತೆ ನಿರಾಸೆ: ಸೆಪ್ಟೆಂಬರ್ ಅಂತ್ಯದವರೆಗೂ ಚಿತ್ರಮಂದಿರ ಲಾಕ್!
ಲಾಕ್ಡೌನ್ ಹಿನ್ನೆಲೆ ಐದಾರು ತಿಂಗಳಿಂದ ಮುಚ್ಚಲ್ಪಟ್ಟಿರುವ ಚಿತ್ರಮಂದಿರಗಳು ಹಾಗೂ ಮಲ್ಟಿಫ್ಲೆಕ್ಸ್ಗಳ ಇನ್ನೂ ಒಂದು ತಿಂಗಳು ತೆರೆಯುವಂತಿಲ್ಲ. ನಿನ್ನೆಯಷ್ಟೇ (ಆಗಸ್ಟ್ 29) ಕೇಂದ್ರದಿಂದ ಅನ್ಲಾಕ್4 ಮಾರ್ಗಸೂಚಿ ಪ್ರಕಟವಾಗಿದ್ದು, ಸೆಪ್ಟೆಂಬರ್ ಅಂತ್ಯದವರೆಗೂ ಚಿತ್ರಮಂದಿರ ತೆರೆಯದಂತೆ ಸೂಚಿಸಿದೆ. ಈ ಮೂಲಕ ಕನ್ನಡ ಕಲಾಭಿಮಾನಿಗಳು ಹಾಗೂ ಥಿಯೇಟರ್ ಮಾಲಿಕರು ನಿರಾಸೆಯಾಗಿದ್ದಾರೆ.
Recommended Video
150ಕ್ಕೂ ಹೆಚ್ಚು ದಿನಗಳಿಂದ ಚಿತ್ರಮಂದಿರ ಮುಚ್ಚಿರುವುದರಿಂದ ಸಹಜವಾಗಿ ಥಿಯೇಟರ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಬಿಡುಗಡೆ ಇಲ್ಲದೇ ನಿರ್ಮಾಪಕರು ಸಹ ಕಂಗಾಲಾಗಿದ್ದಾರೆ. ಕೆಲವು ಚಿತ್ರಗಳು ಮಾತ್ರ ಆನ್ಲೈನ್ ಬಿಡುಗಡೆ ಕಂಡಿದೆ.
ಅನ್ಲಾಕ್ 4 ಮಾರ್ಗಸೂಚಿ: ಶಾಲೆ, ಚಿತ್ರಮಂದಿರ ತೆರೆಯಲು ಒಪ್ಪಿಗೆ ಇಲ್ಲ
ಚಿತ್ರಮಂದಿರ ತೆರೆಯಲು ಅನುಮತಿ ನೀಡಿ ಎಂದು ಒತ್ತಾಯಿಸಿ ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ವಿನಂತಿಸಿಕೊಂಡಿತ್ತು.
ರಾಜ್ಯ ಸರ್ಕಾರ ಸಹ ಸೆಪ್ಟೆಂಬರ್ ತಿಂಗಳಿನಿಂದ ಚಿತ್ರಮಂದಿರ ತೆರೆಯಲು ಅನುಮತಿ ನೀಡುವ ಬಗ್ಗೆ ಸಕಾರಾತ್ಮಕ ನಿರ್ಧಾರಕ್ಕೆ ಬಂದಿತ್ತು. ಆದರೆ, ಕೇಂದ್ರ ಮಾರ್ಗಸೂಚಿ ಮತ್ತೆ ನಿರಾಸೆ ಮೂಡಿಸಿದೆ.
ಆರಂಭಿಕ ಹಂತದಲ್ಲಿ ಮಲ್ಟಿಫ್ಲೆಕ್ಸ್ ಗಳಿಗೆ ಅವಕಾಶ ಸಿಗವ ಸಾಧ್ಯತೆ ಇದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಕ್ಕೂ ಅನುಮತಿ ಸಿಕ್ಕಿಲ್ಲ.