Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯುತ್ತಮ ಚಿತ್ರಕ್ಕಾಗಿ 'ಜಗ್ಗುದಾದ'ಗೆ ಫಿಲ್ಮಿಬೀಟ್ ಪ್ರಶಸ್ತಿ ಪ್ರದಾನ
2016ನೇ ಸಾಲಿನ ನಿಮ್ಮ ಫಿಲ್ಮಿಬೀಟ್ ಕನ್ನಡದ 'ಬೆಸ್ಟ್ ಆಫ್ ಸ್ಯಾಂಡಲ್ ವುಡ್' ಪೋಲ್ ನಲ್ಲಿ ಸಾವಿರಾರು ಓದುಗರು 'ಜಗ್ಗುದಾದ' ಚಿತ್ರವನ್ನ ಅತ್ಯುತ್ತಮ ಚಿತ್ರವೆಂದು ಪ್ರೀತಿಯಿಂದ ಆಯ್ಕೆ ಮಾಡಿದ್ದರು.[ಸಿನಿಪ್ರಿಯರ ಜಡ್ಜ್ ಮೆಂಟ್: 2016ರ ಅತ್ಯುತ್ತಮ ಕಮರ್ಶಿಯಲ್ ಚಿತ್ರ 'ಜಗ್ಗುದಾದಾ'.! ]
ಓದುಗರ ಇಚ್ಛೆಯಂತೆ 'ಜಗ್ಗುದಾದ' ಚಿತ್ರಕ್ಕೆ ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ ತಂಡದಿಂದ ನಿನ್ನೆ (ಮಾರ್ಚ್ 23) 'ಅತ್ಯುತ್ತಮ ಚಿತ್ರವೆಂದು' ಪ್ರಶಸ್ತಿ ಪ್ರದಾನ ಮಾಡಲಾಯಿತು. 'ಜಗ್ಗುದಾದ' ಚಿತ್ರದ ಪರವಾಗಿ, ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗಡೆ ಅವರು ಈ ಪ್ರಶಸ್ತಿಯನ್ನ ಪಡೆದರು.
'ಅತ್ಯುತ್ತಮ ಚಿತ್ರ' ಜಗ್ಗುದಾದ
'ಫಿಲ್ಮಿಬೀಟ್ ಕನ್ನಡ' ಓದುಗರ ತೀರ್ಪಿನಂತೆ 'ಅತ್ಯುತ್ತಮ ಚಿತ್ರ-2016' ಪ್ರಶಸ್ತಿಯನ್ನ ರಾಘವೇಂದ್ರ ಹೆಗಡೆ ನಿರ್ದೇಶನದ 'ಜಗ್ಗುದಾದ' ಪಡೆದುಕೊಂಡಿದೆ.[ಜನ ಮೆಚ್ಚಿದ 'ಅರ್ಜುನ್ ಜನ್ಯ'ಗೆ ಫಿಲ್ಮಿಬೀಟ್ ಕಡೆಯಿಂದ ಪ್ರೀತಿಯ ಸನ್ಮಾನ]
ರಾಘವೇಂದ್ರ ಹೆಗಡೆಗೆ ಪ್ರಶಸ್ತಿ ಪ್ರದಾನ
'ಫಿಲ್ಮಿಬೀಟ್ ಕನ್ನಡ' ಓದುಗರ ಪರವಾಗಿ 'ಜಗ್ಗುದಾದ' ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ 'ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ' ಸಂಪಾದಕರ ಶಾಮಸುಂದರ ಅವರು 'ಅತ್ಯುತ್ತಮ ಚಿತ್ರ-2016' ಪ್ರಶಸ್ತಿ ಪ್ರದಾನ ಮಾಡಿದರು.['ಫಿಲ್ಮಿಬೀಟ್ ಕನ್ನಡ'ದಿಂದ 'ರಾಮಾ ರಾಮಾ ರೇ' ಚಿತ್ರಕ್ಕೆ ವಿಶೇಷ ಪ್ರಶಸ್ತಿ ]
ಒನ್ ಇಂಡಿಯಾ ಕಚೇರಿಯಲ್ಲಿ ಸನ್ಮಾನ
ಬೆಂಗಳೂರಿನ ಜಯನಗರ 3ನೇ ಹಂತದಲ್ಲಿರುವ ನಮ್ಮ ಒನ್ ಇಂಡಿಯಾ/ಫಿಲ್ಮಿಬೀಟ್ ಕಚೇರಿಗೆ ಪ್ರೀತಿಯಿಂದ ಆಗಮಿಸಿದ್ದ 'ಜಗ್ಗುದಾದ' ಚಿತ್ರದ ನಿರ್ದೇಶಕ ರಾಘವೇಂದ್ರ ಹೆಗಡೆ ಅವರಿಗೆ 'ಫಿಲ್ಮಿಬೀಟ್ ಕನ್ನಡ' ತಂಡ ಆತ್ಮೀಯವಾಗಿ ಸನ್ಮಾನಿಸಿತು.['ತಿಥಿ' ಸ್ಟಾರ್ 'ಗಡ್ಡಪ್ಪ'ನಿಗೆ ಪ್ರಶಸ್ತಿ ಪ್ರದಾನ ಮಾಡಿದ ಫಿಲ್ಮಿಬೀಟ್ ಕನ್ನಡ ]
'ಫಿಲ್ಮಿಬೀಟ್ ತಂಡ' ಉಪಸ್ಥಿತಿ
ಇದೇ ವೇಳೆ ನಿಮ್ಮ 'ಫಿಲ್ಮಿಬೀಟ್ ಕನ್ನಡ' ತಂಡದಿಂದ ಹರ್ಷಿತಾ ರಾಕೇಶ್, ಭರತ್ ಕುಮಾರ್, ರಾಘವೇಂದ್ರ.ಸಿ.ವಿ ಹಾಗೂ ಸುಹಾಸ್ ಹಾಜರಿದ್ದರು.['ಫಿಲ್ಮಿಬೀಟ್ ಕನ್ನಡ'ದಿಂದ 'ಕರ್ವ' ನಿರ್ದೇಶಕರಿಗೆ ಪ್ರಶಸ್ತಿ ಪ್ರದಾನ ]
ಸಂದರ್ಶನದ ವಿಡಿಯೋ ಇಲ್ಲಿದೆ ನೋಡಿ
'ಫಿಲ್ಮಿಬೀಟ್ ಕನ್ನಡ ಅವಾರ್ಡ್' ಸ್ವೀಕರಿಸಿ, ನಿಮ್ಮ 'ಫಿಲ್ಮಿಬೀಟ್ ಕನ್ನಡ' ತಂಡಕ್ಕೆ ರಾಘವೇಂದ್ರ ಹೆಗಡೆ ನೀಡಿರುವ ಎಕ್ಸ್ ಕ್ಲೂಸಿವ್ ಸಂದರ್ಶನ ಇಲ್ಲಿದೆ ನೋಡಿ.