Don't Miss!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ಪುತ್ರ ಮನೋರಂಜನ್ 2017ರ ಅತ್ಯುತ್ತಮ ಉದಯೋನ್ಮಖ ನಟ
ಪ್ರತಿವರ್ಷವೂ ಹೊಸ ಹೊಸ ಪ್ರತಿಭೆಗಳು ಕನ್ನಡ ಇಂಡಸ್ಟ್ರಿಗೆ ಬರ್ತಿದ್ದಾರೆ. ಇಂತಹ ನವ ಕಲಾವಿದರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಫಿಲ್ಮಿಬೀಟ್ ಆಯೋಜಿಸಿದ್ದ 'ಬೆಸ್ಟ್ ಅಫ್ ಸ್ಯಾಂಡಲ್ ವುಡ್-2017' ಪೋಲ್ ನಲ್ಲಿ ಅತ್ಯುತ್ತಮ ಉದಯೋನ್ಮುಖ ನಟ ವಿಭಾಗದಲ್ಲಿ ಸ್ಪರ್ಧೆ ನಡೆಸಲಾಗಿತ್ತು.
ಈ ಸ್ಪರ್ಧೆಯ ಫಲಿತಾಂಶ ಈಗಾಗಲೇ ಪ್ರಕಟವಾಗುತ್ತಿದ್ದು, ಈಗ ಅತ್ಯುತ್ತಮ ನವನಟ ಯಾರೆಂದು ಬಹಿರಂಗವಾಗಿದೆ. 'ಸಾಹೇಬ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ ಮನೋರಂಜನ್ 2017ರ ಉದಯೋನ್ಮುಖ ನಟನಾಗಿ ಹೊರಹೊಮ್ಮಿದ್ದಾರೆ.
ಓದುಗರ ಮಹಾತೀರ್ಪು: 2017ರ 'ಅತ್ಯುತ್ತಮ ನಟ' ದರ್ಶನ್
ಹಾಗಿದ್ರೆ, ಮನೋರಂಜನ್ ಗಳಿಸಿದ ಮತಗಳೆಷ್ಟು? ಯಾರೆಲ್ಲ ಯುವ ನಟರು ಈ ರೇಸ್ ನಲ್ಲಿದ್ದರು ಎಂಬುದನ್ನ ತಿಳಿಯಲು ಮುಂದೆ ಓದಿ.....
ಅತ್ಯುತ್ತಮ ಉದಯೋನ್ಮುಖ ನಟ ಮನೋರಂಜನ್
'ಒನ್ ಇಂಡಿಯಾ/ಫಿಲ್ಮಿಬೀಟ್ ಕನ್ನಡ' ಓದುಗರ ಆಯ್ಕೆ ಪ್ರಕಾರ, 2017ರ 'ಅತ್ಯುತ್ತಮ ಉದಯೋನ್ಮುಖ ನಟ'ನಾಗಿ ಕ್ರೇಜಿಸ್ಟಾರ್ ಪುತ್ರ ಮನೋರಂಜನ್ ಆಯ್ಕೆಯಾಗಿದ್ದಾರೆ.
2017ರ ಅತ್ಯುತ್ತಮ ಕಮರ್ಷಿಯಲ್ ಸಿನಿಮಾ 'ತಾರಕ್'
ಕ್ರೇಜಿಪುತ್ರನ 'ಸಾಹೇಬ'
ಪ್ರತಿಭಾನ್ವಿತ ಯುವ ನಟರ ಜೊತೆ ಸ್ಪರ್ಧೆಯಲ್ಲಿದ್ದ ಮನೋರಂಜನ್ 57% ರಷ್ಟು ಮತಗಳನ್ನು ಪಡೆಯುವುದರ ಮೂಲಕ ವಿಜಯಶಾಲಿ ಆಗಿದ್ದಾರೆ. ಕಳೆದ ವರ್ಷ 'ಸಾಹೇಬ' ಚಿತ್ರದ ಮೂಲಕ ಮನೋರಂಜನ್ ಗೆ ಇಂಡಸ್ಟ್ರಿಗೆ ಎಂಟ್ರಿಕೊಟ್ಟಿದ್ದರು.
ಸಾಹೇಬನಿಗೆ ಫೈಟ್ ನೀಡಿದ ರಿಷಿ
ಮನೋರಂಜನ್ ಅವರ 'ಸಾಹೇಬ' ಚಿತ್ರಕ್ಕೆ 'ಆಪರೇಷನ್ ಅಲಮೇಲಮ್ಮ' ಖ್ಯಾತಿಯ ರಿಷಿ ತೀವ್ರ ಪೈಪೋಟಿ ನೀಡಿದ್ದರು. ಅಂತಿಮವಾಗಿ, 24% ರಷ್ಟು ಮತಗಳನ್ನ ಪಡೆದು ರಿಷಿ ಎರಡನೇ ಸ್ಥಾನ ಪಡೆದುಕೊಂಡರು.
ಓದುಗರ ಅಭಿಮತ: 2017ರ 'ಅತ್ಯುತ್ತಮ ನಟಿ' ಶಾನ್ವಿ ಶ್ರೀವಾಸ್ತವ್
ನಂತರದ ಸ್ಥಾನದಲ್ಲಿ.....
ಮನೋರಂಜನ್, ರಿಷಿ ನಂತರ 'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ ಶೆಟ್ಟಿ, 'ಹುಲಿರಾಯ' ಖ್ಯಾತಿಯ ಬಾಲು ನಾಗೇಂದ್ರ, 'ರೋಗ್' ಚಿತ್ರದ ನಾಯಕ ಇಶಾನ್ ಮತ್ತು 'ಮನಸು ಮಲ್ಲಿಗೆ' ಚಿತ್ರದ ನಾಯಕ ನಿಶಾಂತ್ ಕ್ರಮವಾಗಿ ಸ್ಥಾನ ಪಡೆದುಕೊಂಡಿದ್ದಾರೆ.