Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲ್ವಾರ್ ನಲ್ಲಿ ಕೇಕ್ ಕಟಿಂಗ್: ನಟ ದುನಿಯಾ ವಿಜಯ್ ವಿರುದ್ಧ ಎಫ್.ಐ.ಆರ್.!
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ದುನಿಯಾ ವಿಜಯ್ ಮಾಡಿದ ಒಂದು ಎಡವಟ್ಟು ಇದೀಗ ಸಂಕಷ್ಟಕ್ಕೆ ಕಾರಣವಾಗಿದೆ. ಬರ್ತಡೇ ಸೆಲೆಬ್ರೇಷನ್ ವೇಳೆ ತಲ್ವಾರ್ ನಿಂದ ಕೇಕ್ ಕಟ್ ಮಾಡಿದ ನಟ ದುನಿಯಾ ವಿಜಯ್ ವಿರುದ್ಧ ಇದೀಗ ಎಫ್.ಐ.ಆರ್ ದಾಖಲಾಗಿದೆ.
ಘಟನೆಯ ಹಿನ್ನಲೆ: ಜನವರಿ 20 ರಂದು ನಟ ದುನಿಯಾ ವಿಜಯ್ ಕುಟುಂಬ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು. ಈ ವೇಳೆ ತಲ್ವಾರ್ ನಿಂದ ದುನಿಯಾ ವಿಜಯ್ ಕೇಕ್ ಕಟ್ ಮಾಡಿದ್ದರು.
ಹುಟ್ಟುಹಬ್ಬದಂದು ದುನಿಯಾ ವಿಜಿ ಮತ್ತೊಂದು ವಿವಾದ: ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ ನಟ
ಇದನ್ನು ಗಮನಿಸಿದ ಡಿಸಿಪಿ ರೋಹಿಣಿ ತನಿಖೆ ನಡೆಸುವಂತೆ ಗಿರಿನಗರ ಪೊಲೀಸರಿಗೆ ಸೂಚನೆ ನೀಡಿದ್ದರು. ದುನಿಯಾ ವಿಜಯ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದ ಗಿರಿನಗರ ಪೊಲೀಸರು ಇದೀಗ ಸೆಕ್ಷನ್ 283 ಅಡಿಯಲ್ಲಿ ಎಫ್.ಐ.ಆರ್ ಹಾಕಿದ್ದಾರೆ.
ಹುಟ್ಟುಹಬ್ಬದ ದಿನ ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ ವಿಜಯ್ ವಿರುದ್ಧ ಕೇಸ್ ದಾಖಲು
ತಲ್ವಾರ್ ನಲ್ಲಿ ಕೇಕ್ ಕಟ್ ಮಾಡಿದ್ದು ತಪ್ಪು ಎಂದು ಗೊತ್ತಾಗುತ್ತಿದ್ದಂತೆಯೇ, ''ನನ್ನ ಗಮನಕ್ಕೆ ಬಾರದೆ ಎಡವಟ್ಟಾಗಿದೆ. ಕ್ಷಮೆ ಇರಲಿ'' ಎಂದು ದುನಿಯಾ ವಿಜಯ್ ಕ್ಷಮೆ ಕೇಳಿದ್ದರು. ಪೊಲೀಸ್ ಠಾಣೆಗೂ ತೆರಳಿ ತಪ್ಪೊಪ್ಪಿಕೊಂಡಿದ್ದರು.