Don't Miss!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐಆರ್
ಮಾಜಿ ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದಕ್ಕೆ ದೂರು ದಾಖಲಿಸಲಾಗಿದೆ.
ಸ್ವಯಂ ಘೋಷಿತ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಡಿಕೆ ಶಿವಕುಮಾರ್ ವಿರುದ್ಧ ಹಲವು ಅವಹೇಳನಕಾರಿ ಪೋಸ್ಟ್ ಹಾಕಿರುವ ಜೊತೆಗೆ ಕೋಮುದ್ವೇಷ ಹರಡುವ ಪೋಸ್ಟ್ಗಳನ್ನು ಸಹ ಇತ್ತೀಚಿನ ಕೆಲವು ದಿನಗಳಲ್ಲಿ ಹಂಚಿಕೊಂಡಿದ್ದಾರೆ. ಇದರ ವಿರುದ್ಧವೂ ನಾರಾಯಣ್ ಎಂಬುವರು ಬೆಂಗಳೂರು ದಕ್ಷಿಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ವಿಧಾನಸಭೆಯಲ್ಲಿ ಹರಿದು ಹಾಕಿ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದರು. ಇದರ ವಿರುದ್ಧ ಸತತವಾಗಿ ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುತ್ತಲೇ ಇದ್ದರು.
ಕಾವೇರಿ ಉಗಮ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಸಿದ ವಿಡಿಯೋ ಹಂಚಿಕೊಂಡಿದ್ದ ಪ್ರಶಾಂತ್ ಸಂಬರ್ಗಿ, ''ಇದು ಎಂತಹ ನಾಟಕ ಕುಂಡಿಕೆಯ ಹತ್ತಿರಕ್ಕೂ ಸುಳಿಯಲಿಲ್ಲ, ಕಲ್ಯಾಣಿಗೆ ಇಳಿದು ಸ್ನಾನವು ಮಾಡಲಿಲ್ಲ ಎಲ್ವನ್ನೂ ಬಿಟ್ಟು ಕ್ಯಾಮರದ ಕಣ್ಣಿಗೆ ಪೋಸ್ ಕೊಡವ ಸಲುವಾಗಿ ದೇವರಿಗೆ ಬೆನ್ನು ಹಾಕಿ ನಮಸ್ಕರಿಸುತ್ತಿರುವ ಡಿ ಕೆ ಶಿವಕುಮಾರ್. ದೇವರಿಗೆ ಅವಮಾನ ಮಾಡಿರುವುದನ್ನು ಕೊಡಗಿನ ಜನತೆ ಸಹಿಸಲಾರರು'' ಎಂದಿದ್ದರು.
ಕ್ರಿಸ್ಮಸ್ ಹಬ್ಬದ ಬಗ್ಗೆಯೂ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಶಾಂತ್ ಸಂಬರ್ಗಿ, ''ಎಚ್ಚರಿಕೆ.. ಹುಚ್ಚು ಜನರ ಹಬ್ಬ ಬರುತ್ತಿದೆ'' ಎಂದು ಬರೆದು ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಇದರ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಮೊದಲು ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಪ್ರಶಾಂತ್ ಸಂಬರ್ಗಿಯ ಸಹಸ್ಪರ್ಧಿ ಆಗಿದ್ದ ಚಕ್ರವರ್ತಿ ಚಂದ್ರಚೂಡ್ ಅವರೇ ಪ್ರಶಾಂತ್ ಸಂಬರ್ಗಿ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹಾಗೂ ಸೈಬರ್ ಪೊಲೀಸರಿಗೆ ಪ್ರಶಾಂತ್ ಸಂಬರ್ಗಿಯ ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ಗಳ ವಿರುದ್ಧ ದೂರು ನೀಡಿದ್ದರು.