Don't Miss!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- News ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ: ಜೆಡಿಎಸ್ ಕೊನೆಯ ಕ್ಷಣದ ನಿರ್ಧಾರವೇನು..?
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಧ್ರುವ ಸರ್ಜಾ ಅಭಿಮಾನಿಗಳ ವಿರುದ್ಧ ಎಫ್.ಐ.ಆರ್ ದಾಖಲು
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ನಂದಕಿಶೋರ್ ನಿರ್ದೇಶನ ಮಾಡ್ತಿರುವ 'ಪೊಗರು' ಚಿತ್ರದಲ್ಲಿ ಅಭಿನಯಿಸುತ್ತಿರುವ ಧ್ರುವ ಇತ್ತೀಚಿಗಷ್ಟೆ ತಮ್ಮ 29ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು.
ಈ ವೇಳೆ ಧ್ರುವ ಸರ್ಜಾ ಅವರ ಮನೆಯ ಸುತ್ತಮುತ್ತ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನ ಹಾಕಲಾಗಿತ್ತು. ಇದು ಕಾನೂನು ಬಾಹಿರವಾಗಿದ್ದರಿಂದ ಧ್ರುವ ಸರ್ಜಾಅಭಿಮಾನಿಗಳ ವಿರುದ್ಧ ಬಿಬಿಎಂಪಿ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ.
ಮುಂದಿನ ಬರ್ತಡೇಯಷ್ಟರಲ್ಲಿ ಧ್ರುವ ಸರ್ಜಾ ಮದುವೆ.!
ಅಕ್ಟೋಬರ್ 6ರಂದು ಧ್ರುವ ಸರ್ಜಾ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನಿವಾಸದ ಬಳಿ ಅಭಿಮಾನಿಗಳು ಫ್ಲೆಕ್ಸ್ ಹಾಗೂ ಕಟೌಟ್ ಹಾಕಿ ಶುಭಕೋರಿದ್ದರು. ಈ ಕುರಿತು ಬನಶಂಕರಿ ಉಪ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಧ್ರುವ ಸರ್ಜಾ ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಫ್.ಐ.ಆರ್ ಹಾಕಿದ್ದಾರೆ.
ಏನೇ ಹೇಳಿದರು ಧ್ರುವ ಅಂಜಲಿಲ್ಲ, ಅಳುಕಲಿಲ್ಲ
#Bengaluru: Complaint lodged at Banashankari police station against Kannada actor Dhruva Sarja by Assistant Revenue Officer of Bruhat Bengaluru Mahanagara Palike (BBMP) for putting unauthorized flex boards on his birthday. pic.twitter.com/522MLb2Zbf
— ANI (@ANI) October 15, 2018
ಫ್ಲೆಕ್ಸ್, ಕಟೌಟ್, ಬ್ಯಾನರ್ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ಹೈಕೋರ್ಟ್ ಆದೇಶವಿದೆ. ಈ ಸೂಚನೆಯ ಮೆರೆಗೆ ಬಿಬಿಎಂಪಿ ನಗರದಲ್ಲಿ ಫ್ಲೆಕ್ಸ್, ಬ್ಯಾನರ್, ಕಟೌಟ್, ಬಂಟಿಂಗ್ಸ್, ಹೋರ್ಡಿಂಗ್ ಹಾಕುವುದನ್ನ ನಿಯಂತ್ರಣ ಮಾಡುತ್ತಿದೆ.
'ಧ್ರುವ ಸರ್ಜಾ ಮುಂದಿನ ದರ್ಶನ್' ಅಂದಿದ್ದಕ್ಕೆ ಆಕ್ಷನ್ ಪ್ರಿನ್ಸ್ ಹೇಳಿದ್ದೇನು.?
ಇನ್ನು ಮತ್ತೊಂದೆಡೆ ಸಿನಿಮಾ ಪ್ರಚಾರಕ್ಕಾಗಿ ನಿರ್ದಿಷ್ಟವಾದ ಸ್ಥಳಗಳಲ್ಲಿ ಜಾಹೀರಾತು ಹಾಕಲು ಅನುಮತಿ ನೀಡಿ ಎಂದು ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಬಳಿ ಮನವಿ ಮಾಡಿದೆ.