Don't Miss!
- News
ರಾಜ್ಯ ಬಜೆಟ್: ನೇಕಾರರ ಅಭಿವೃದ್ಧಿಗೆ ಯೋಜನೆ ಘೋಷಣೆ: ಸಿಎಂ ಭರವಸೆ
- Sports
ಭಾರತೀಯ ಕ್ರಿಕೆಟ್ನ ಭವಿಷ್ಯದ ಕುರಿತು ದೊಡ್ಡ ಹೇಳಿಕೆ ನೀಡಿದ ಮಾಜಿ ನಾಯಕ ಕಪಿಲ್ ದೇವ್
- Finance
ಎಚ್ಡಿಎಫ್ಸಿಯಿಂದ 10ವರ್ಷದಲ್ಲಿ 30ಶತಕೋಟಿ ಸಂಗ್ರಹದ ಚಿಂತನೆ
- Technology
ಏರ್ಟೆಲ್ 5G+ ಯಿಂದ ರೈತರಿಗೆ ನೆರವು; ಭಾರೀ ಇಳುವರಿ ಪಡೆಯಬಹುದು!
- Automobiles
ಬೆಲೆ ಇಳಿಸಿ, ಹೆಚ್ಚಿನ ಮೈಲೇಜ್ನೊಂದಿಗೆ ಟಾಟಾ ಬಿಡುಗಡೆಗೊಳಿಸಿದ ನೆಕ್ಸಾನ್ ಇವಿ ವಿಶೇಷತೆಗಳು
- Lifestyle
ವಾರ ಭವಿಷ್ಯ ಜ.22-ಜ.28: ಈ ವಾರ ಯಾವ ರಾಶಿಯವರಿಗೆ ಅದೃಷ್ಟ, ಯಾರು ಸ್ವಲ್ಪ ಜಾಗ್ರತೆವಹಿಸಬೇಕು ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು
ಖ್ಯಾತ ಸಿನಿಮಾ ನಿರ್ಮಾಪಕ ಕೆ.ಮಂಜು ವಿರುದ್ಧ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
Recommended Video
'ಹೆಬ್ಬೆಟ್ ರಾಮಕ್ಕ' ಸಿನಿಮಾದ ನಿರ್ಮಾಪಕ ಪುಟ್ಟರಾಜು ಅವರು ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಕೆ.ಮಂಜು ವಿರುದ್ಧ ದೂರು ದಾಖಲಿಸಿದ್ದಾರೆ.
ಕೆ.ಮಂಜು ಮಾತ್ರವಲ್ಲದೆ ಹೊಸಕೋಟೆಯ ರಾಜಗೋಪಾಲ್, ರಮೇಶ್ ಬಾಬು, ವಿಜಯಲಕ್ಷ್ಮಿ ಎಂಬುವರ ವಿರುದ್ಧವೂ ಪುಟ್ಟರಾಜು ಪ್ರಕರಣ ದಾಖಲಿಸಿದ್ದಾರೆ. ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 420, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕೆ.ಮಂಜು ಎರಡನೇ ಆರೋಪಿ ಆಗಿದ್ದಾರೆ.
2018 ರಲ್ಲಿ ಆರೋಪಿತ ರಾಜಗೋಪಾಲ್ ತಮ್ಮ ಮಾರಾಟ ಮಾಡಿದ್ದರು. ಆಗ ಪುಟ್ಟರಾಜು ಅವರು ರಾಜಗೋಪಾಲ್ ಗೆ ಮುಂಗಡ ಹಣ ಪಾವತಿಸಿದ್ದರು. ನಂತರ ಅದೇ ಜಮೀನನ್ನು ಕೆ.ಮಂಜು ರಿಜಿಸ್ಟರ್ ಮಾಡಿಕೊಂಡಿದ್ದಾರೆ, ತಾವು ರಾಜಗೋಪಾಲ್ಗೆ 68 ಲಕ್ಷ, ಕೆ.ಮಂಜು ಅವರಿಗೆ 1.10 ಕೋಟಿ ರೂಪಾಯಿ ಪಾವತಿಸಿರುವುದಾಗಿ ಆರೋಪ ಮಾಡಿದ್ದಾರೆ ಪುಟ್ಟರಾಜು.
'ಕೆ.ಮಂಜು ಸಿನಿಮಾಸ್' ಮತ್ತು ಲಕ್ಷ್ಮಿಶ್ರೀ ಹೆಸರಿನ ಸಿನಿಮಾ ಪ್ರೊಡಕ್ಷನ್ ಹೌಸ್ಗಳನ್ನು ಕೆ.ಮಂಜು ಹೊಂದಿದ್ದು. 1996 ರಿಂದಲೂ ಸಿನಿಮಾ ನಿರ್ಮಾಣ ಉದ್ಯಮದಲ್ಲಿ ತೊಡಗಿದ್ದಾರೆ. 2017 ರಲ್ಲಿ ಬಿಡುಗಡೆಯಾದ 'ಸತ್ಯ ಹರಿಶ್ಚಂದ್ರ' ಸಿನಿಮಾ ಬಳಿಕ ಹೊಸ ಸಿನಿಮಾವನ್ನು ಕೆ.ಮಂಜು ನಿರ್ಮಿಸಿಲ್ಲ.