Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು
ಖ್ಯಾತ ಸಿನಿಮಾ ನಿರ್ಮಾಪಕ ಕೆ.ಮಂಜು ವಿರುದ್ಧ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
Recommended Video
'ಹೆಬ್ಬೆಟ್ ರಾಮಕ್ಕ' ಸಿನಿಮಾದ ನಿರ್ಮಾಪಕ ಪುಟ್ಟರಾಜು ಅವರು ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಕೆ.ಮಂಜು ವಿರುದ್ಧ ದೂರು ದಾಖಲಿಸಿದ್ದಾರೆ.
ಕೆ.ಮಂಜು ಮಾತ್ರವಲ್ಲದೆ ಹೊಸಕೋಟೆಯ ರಾಜಗೋಪಾಲ್, ರಮೇಶ್ ಬಾಬು, ವಿಜಯಲಕ್ಷ್ಮಿ ಎಂಬುವರ ವಿರುದ್ಧವೂ ಪುಟ್ಟರಾಜು ಪ್ರಕರಣ ದಾಖಲಿಸಿದ್ದಾರೆ. ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 420, 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕೆ.ಮಂಜು ಎರಡನೇ ಆರೋಪಿ ಆಗಿದ್ದಾರೆ.
2018 ರಲ್ಲಿ ಆರೋಪಿತ ರಾಜಗೋಪಾಲ್ ತಮ್ಮ ಮಾರಾಟ ಮಾಡಿದ್ದರು. ಆಗ ಪುಟ್ಟರಾಜು ಅವರು ರಾಜಗೋಪಾಲ್ ಗೆ ಮುಂಗಡ ಹಣ ಪಾವತಿಸಿದ್ದರು. ನಂತರ ಅದೇ ಜಮೀನನ್ನು ಕೆ.ಮಂಜು ರಿಜಿಸ್ಟರ್ ಮಾಡಿಕೊಂಡಿದ್ದಾರೆ, ತಾವು ರಾಜಗೋಪಾಲ್ಗೆ 68 ಲಕ್ಷ, ಕೆ.ಮಂಜು ಅವರಿಗೆ 1.10 ಕೋಟಿ ರೂಪಾಯಿ ಪಾವತಿಸಿರುವುದಾಗಿ ಆರೋಪ ಮಾಡಿದ್ದಾರೆ ಪುಟ್ಟರಾಜು.
'ಕೆ.ಮಂಜು ಸಿನಿಮಾಸ್' ಮತ್ತು ಲಕ್ಷ್ಮಿಶ್ರೀ ಹೆಸರಿನ ಸಿನಿಮಾ ಪ್ರೊಡಕ್ಷನ್ ಹೌಸ್ಗಳನ್ನು ಕೆ.ಮಂಜು ಹೊಂದಿದ್ದು. 1996 ರಿಂದಲೂ ಸಿನಿಮಾ ನಿರ್ಮಾಣ ಉದ್ಯಮದಲ್ಲಿ ತೊಡಗಿದ್ದಾರೆ. 2017 ರಲ್ಲಿ ಬಿಡುಗಡೆಯಾದ 'ಸತ್ಯ ಹರಿಶ್ಚಂದ್ರ' ಸಿನಿಮಾ ಬಳಿಕ ಹೊಸ ಸಿನಿಮಾವನ್ನು ಕೆ.ಮಂಜು ನಿರ್ಮಿಸಿಲ್ಲ.