Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಲೀಲಾವತಿ ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದಲ್ಲಿ ನಷ್ಟ.!
ಹಿರಿಯ ನಟಿ ಲೀಲಾವತಿ ಅವರ ತೋಟದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿದೆ. ನೆಲಮಂಗಲ ತಾಲೂಕು ಮೈಲಹಳ್ಳಿ ಸಮೀಪದಲ್ಲಿ ಇರುವ ತೋಟದಲ್ಲಿ ನಿನ್ನೆ ಮಧ್ಯಾಹ್ನ ದಿಢೀರನೆ ಬೆಂಕಿ ಹೊತ್ತಿಕೊಂಡಿದೆ.
ತೋಟಕ್ಕೆ ಬೆಂಕಿ ತಗುಲಿದ್ದು ಅರಿವಿಗೆ ಬರುತ್ತಿದ್ದಂತೆಯೇ, ವಿನೋದ್ ರಾಜ್ ಬೆಂಕಿ ನಂದಿಸಲು ಪ್ರಯತ್ನಿಸಿದರು. ಸಹಾಯಕ್ಕಾಗಿ ಕೆಲವರಿಗೆ ಫೋನ್ ಮಾಡಿದರು. ವಿನೋದ್ ರಾಜ್ ಮತ್ತು ಸ್ನೇಹಿತರು ತೋಟದಲ್ಲಿ ಬೆಂಕಿ ಆರಿಸಲು ಹರಸಾಹಸ ಪಟ್ಟರು.
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
ಇಡೀ ತೋಟದಲ್ಲಿ ವ್ಯಾಪಕವಾಗಿ ಬೆಂಕಿ ಆವರಿಸಿಕೊಂಡ ಪರಿಣಾಮ, 20ಕ್ಕೂ ಹೆಚ್ಚು ತೆಂಗಿನ ಮರ, ಮಾವು, ಸಪೋಟ ಮುಂತಾದ ಮರ-ಗಿಡಗಳು ಸುಟ್ಟು ಭಸ್ಮವಾಗಿವೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರೀತಿಯಿಂದ ಬೆಳೆಸಿದ ತೋಟ ಬೆಂಕಿಗೆ ಆಹುತಿಯಾಗಿದ್ದರಿಂದ ಲೀಲಾವತಿ ಕಣ್ಣೀರಿಟ್ಟಿದ್ದಾರೆ.
ವಿನೋದ್ ರಾಜ್ ಬಳಿ 1 ಲಕ್ಷ ಹಣ ಕದ್ದು ಪರಾರಿಯಾದ ಕಳ್ಳರು
ಅಸಲಿಗೆ, ನಟಿ ಲೀಲಾವತಿ ಮತ್ತು ವಿನೋದ್ ರಾಜ್ ವಾಸವಾಗಿರುವುದು ಇದೇ ತೋಟದ ಮನೆಯಲ್ಲಿ. ಲೀಲಾವತಿ ತೋಟಕ್ಕೆ ಬೆಂಕಿ ಬಿದ್ದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ತೋಟಕ್ಕೆ ಬೆಂಕಿ ಬಿದ್ದಿದೆ. ಲೀಲಾವತಿ ಮತ್ತು ವಿನೋದ್ ರಾಜ್ ಗೆ ನಷ್ಟ ಉಂಟು ಮಾಡಲು ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ.? ಎಂಬ ಪ್ರಶ್ನೆ ಹಲವರಿಗೆ ಕಾಡುತ್ತಿದೆ.