Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಲೀಲಾವತಿ ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದಲ್ಲಿ ನಷ್ಟ.!
ಹಿರಿಯ ನಟಿ ಲೀಲಾವತಿ ಅವರ ತೋಟದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿದೆ. ನೆಲಮಂಗಲ ತಾಲೂಕು ಮೈಲಹಳ್ಳಿ ಸಮೀಪದಲ್ಲಿ ಇರುವ ತೋಟದಲ್ಲಿ ನಿನ್ನೆ ಮಧ್ಯಾಹ್ನ ದಿಢೀರನೆ ಬೆಂಕಿ ಹೊತ್ತಿಕೊಂಡಿದೆ.
ತೋಟಕ್ಕೆ ಬೆಂಕಿ ತಗುಲಿದ್ದು ಅರಿವಿಗೆ ಬರುತ್ತಿದ್ದಂತೆಯೇ, ವಿನೋದ್ ರಾಜ್ ಬೆಂಕಿ ನಂದಿಸಲು ಪ್ರಯತ್ನಿಸಿದರು. ಸಹಾಯಕ್ಕಾಗಿ ಕೆಲವರಿಗೆ ಫೋನ್ ಮಾಡಿದರು. ವಿನೋದ್ ರಾಜ್ ಮತ್ತು ಸ್ನೇಹಿತರು ತೋಟದಲ್ಲಿ ಬೆಂಕಿ ಆರಿಸಲು ಹರಸಾಹಸ ಪಟ್ಟರು.
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
ಇಡೀ ತೋಟದಲ್ಲಿ ವ್ಯಾಪಕವಾಗಿ ಬೆಂಕಿ ಆವರಿಸಿಕೊಂಡ ಪರಿಣಾಮ, 20ಕ್ಕೂ ಹೆಚ್ಚು ತೆಂಗಿನ ಮರ, ಮಾವು, ಸಪೋಟ ಮುಂತಾದ ಮರ-ಗಿಡಗಳು ಸುಟ್ಟು ಭಸ್ಮವಾಗಿವೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರೀತಿಯಿಂದ ಬೆಳೆಸಿದ ತೋಟ ಬೆಂಕಿಗೆ ಆಹುತಿಯಾಗಿದ್ದರಿಂದ ಲೀಲಾವತಿ ಕಣ್ಣೀರಿಟ್ಟಿದ್ದಾರೆ.
ವಿನೋದ್ ರಾಜ್ ಬಳಿ 1 ಲಕ್ಷ ಹಣ ಕದ್ದು ಪರಾರಿಯಾದ ಕಳ್ಳರು
ಅಸಲಿಗೆ, ನಟಿ ಲೀಲಾವತಿ ಮತ್ತು ವಿನೋದ್ ರಾಜ್ ವಾಸವಾಗಿರುವುದು ಇದೇ ತೋಟದ ಮನೆಯಲ್ಲಿ. ಲೀಲಾವತಿ ತೋಟಕ್ಕೆ ಬೆಂಕಿ ಬಿದ್ದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ತೋಟಕ್ಕೆ ಬೆಂಕಿ ಬಿದ್ದಿದೆ. ಲೀಲಾವತಿ ಮತ್ತು ವಿನೋದ್ ರಾಜ್ ಗೆ ನಷ್ಟ ಉಂಟು ಮಾಡಲು ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ.? ಎಂಬ ಪ್ರಶ್ನೆ ಹಲವರಿಗೆ ಕಾಡುತ್ತಿದೆ.