Don't Miss!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದು ಸಿನಿಮಾಗಾಗಿ ಒಂದಾಗುತ್ತಿರುವ ಕನ್ನಡದ ಐದು ನಿರ್ದೇಶಕರು
ಕನ್ನಡ ಸಿನಿಮಾರಂಗದಲ್ಲಿ ಒಂದು ವಿಭಿನ್ನ ಪ್ರಯತ್ನ ಮಾಡಲು ಮುಂದಾಗಿದ್ದಾರೆ ಐದು ಖ್ಯಾತ ನಿರ್ದೇಶಕರು. ಹೌದು, ಚಂದನವನದ ಐವರು ನಿರ್ದೇಶಕರು ಒಂದೇ ಸಿನಿಮಾಗಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ಇಂಥ ಹೊಸ ಪ್ರಯತ್ನ ನಡೆಯುತ್ತಿದ್ದು ಚಿತ್ರಾಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಅಂದ್ಹಾಗೆ ಒಂದು ಸಿನಿಮಾಗಾಗಿ ಒಟ್ಟಿಗೆ ಸೇರಿರುವ ಪ್ರಸಿದ್ಧ 5 ಜನ ನಿರ್ದೇಶಕರು ಜಯತೀರ್ಥ, ಯೋಗರಾಜ್ ಭಟ್, ಕೆ.ಎಂ ಚೈತನ್ಯ, ಶಶಾಂಕ್ ಮತ್ತು ಪವನ್ ಕುಮಾರ್. ಈ ಎಲ್ಲಾ ನಿರ್ದೇಶಕರು ಒಂದು ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಪಕ್ಕಾ ಕಮರ್ಶಿಯಲ್ ಚಿತ್ರಕ್ಕಾಗಿ ಎನ್ನುವುದು ವಿಶೇಷ.
ಭಟ್ಟರ ನಿರ್ದೇಶನದಲ್ಲಿ ಶಿವರಾಜ್ ಕುಮಾರ್-ಪ್ರಭುದೇವಾ: ಏನು ನಿರೀಕ್ಷಿಸಬಹುದು?
5 ಜನ ನಿರ್ದೇಶಕರು ಅಂದ್ಮೇಲೆ ಹಲವು ಕಿರುಕಥೆಗಳನ್ನು ಸೇರಿಸಿ ಒಂದು ಸಿನಿಮಾ ಮಾಡುತ್ತಾರೆ ಅಂತ ಅಂದ್ಕೋಬೇಡಿ. ಇಲ್ಲಿ ಬೇರೆ ಬೇರೆ ಕಥೆಗಳಿದ್ದರೂ ಒಂದೊಂದು ಲಿಂಕ್ ಇರುತ್ತೆ ಎಂದು ಹೇಳಲಾಗುತ್ತಿದೆ. ಲಾಕ್ ಡೌನ್ ನಲ್ಲಿ ಈ ಬಗ್ಗೆ ಮಾತುಕತೆ ಮಾಡಿರುವ ನಿರ್ದೇಶಕರು ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸಿದ್ದಾರೆ.
ಮೂಲಗಳ ಪ್ರಕಾರ ಸದ್ಯದಲ್ಲೇ ಚಿತ್ರೀಕರಣ ಸಹ ಪ್ರಾರಂಭ ಮಾಡಲು ನಿರ್ಧರಿಸಿದ್ದಾರಂತೆ. ಡಿಸೆಂಬರ್ ಅಂತ್ಯದ ವೇಳೆಗೆ ಸಿನಿಮಾ ಚಿತ್ರೀಕರಣ ಮುಗಿಸಲು ಚಿತ್ರತಂಡ ಪ್ಲಾನ್ ಮಾಡಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಅಧಿಕೃತ ಘೋಷಣೆಯಾದ ಬಳಿಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
Recommended Video
ಈಗಾಗಲೇ ಕನ್ನಡದಲ್ಲಿ ರಿಷಬ್ ಶೆಟ್ಟಿ ನೇತೃತ್ವದಲ್ಲಿ 7 ಜನ ನಿರ್ದೇಶಕರ ಸಿನಿಮಾವನ್ನು ತಯಾರಿಸಲಾಗಿತ್ತು. ಆದರೆ ಆ ಸಿನಿಮಾದಲ್ಲಿ ಕಿರು ಕಥೆಗಳನ್ನು ಸೇರಿಸಿ ಸಿನಿಮಾ ಮಾಡಲಾಗಿದೆ. ಆದರೆ ಈ ಸಿನಿಮಾ ಹಾಗಿರಲ್ಲ ಎಂದು ಹೇಳಲಾಗುತ್ತಿದೆ.