Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದು ಸಿನಿಮಾಗಾಗಿ ಒಂದಾಗುತ್ತಿರುವ ಕನ್ನಡದ ಐದು ನಿರ್ದೇಶಕರು
ಕನ್ನಡ ಸಿನಿಮಾರಂಗದಲ್ಲಿ ಒಂದು ವಿಭಿನ್ನ ಪ್ರಯತ್ನ ಮಾಡಲು ಮುಂದಾಗಿದ್ದಾರೆ ಐದು ಖ್ಯಾತ ನಿರ್ದೇಶಕರು. ಹೌದು, ಚಂದನವನದ ಐವರು ನಿರ್ದೇಶಕರು ಒಂದೇ ಸಿನಿಮಾಗಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ಇಂಥ ಹೊಸ ಪ್ರಯತ್ನ ನಡೆಯುತ್ತಿದ್ದು ಚಿತ್ರಾಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಅಂದ್ಹಾಗೆ ಒಂದು ಸಿನಿಮಾಗಾಗಿ ಒಟ್ಟಿಗೆ ಸೇರಿರುವ ಪ್ರಸಿದ್ಧ 5 ಜನ ನಿರ್ದೇಶಕರು ಜಯತೀರ್ಥ, ಯೋಗರಾಜ್ ಭಟ್, ಕೆ.ಎಂ ಚೈತನ್ಯ, ಶಶಾಂಕ್ ಮತ್ತು ಪವನ್ ಕುಮಾರ್. ಈ ಎಲ್ಲಾ ನಿರ್ದೇಶಕರು ಒಂದು ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಪಕ್ಕಾ ಕಮರ್ಶಿಯಲ್ ಚಿತ್ರಕ್ಕಾಗಿ ಎನ್ನುವುದು ವಿಶೇಷ.
ಭಟ್ಟರ ನಿರ್ದೇಶನದಲ್ಲಿ ಶಿವರಾಜ್ ಕುಮಾರ್-ಪ್ರಭುದೇವಾ: ಏನು ನಿರೀಕ್ಷಿಸಬಹುದು?
5 ಜನ ನಿರ್ದೇಶಕರು ಅಂದ್ಮೇಲೆ ಹಲವು ಕಿರುಕಥೆಗಳನ್ನು ಸೇರಿಸಿ ಒಂದು ಸಿನಿಮಾ ಮಾಡುತ್ತಾರೆ ಅಂತ ಅಂದ್ಕೋಬೇಡಿ. ಇಲ್ಲಿ ಬೇರೆ ಬೇರೆ ಕಥೆಗಳಿದ್ದರೂ ಒಂದೊಂದು ಲಿಂಕ್ ಇರುತ್ತೆ ಎಂದು ಹೇಳಲಾಗುತ್ತಿದೆ. ಲಾಕ್ ಡೌನ್ ನಲ್ಲಿ ಈ ಬಗ್ಗೆ ಮಾತುಕತೆ ಮಾಡಿರುವ ನಿರ್ದೇಶಕರು ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸವನ್ನು ಪ್ರಾರಂಭಿಸಿದ್ದಾರೆ.
ಮೂಲಗಳ ಪ್ರಕಾರ ಸದ್ಯದಲ್ಲೇ ಚಿತ್ರೀಕರಣ ಸಹ ಪ್ರಾರಂಭ ಮಾಡಲು ನಿರ್ಧರಿಸಿದ್ದಾರಂತೆ. ಡಿಸೆಂಬರ್ ಅಂತ್ಯದ ವೇಳೆಗೆ ಸಿನಿಮಾ ಚಿತ್ರೀಕರಣ ಮುಗಿಸಲು ಚಿತ್ರತಂಡ ಪ್ಲಾನ್ ಮಾಡಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಅಧಿಕೃತ ಘೋಷಣೆಯಾದ ಬಳಿಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
Recommended Video
ಈಗಾಗಲೇ ಕನ್ನಡದಲ್ಲಿ ರಿಷಬ್ ಶೆಟ್ಟಿ ನೇತೃತ್ವದಲ್ಲಿ 7 ಜನ ನಿರ್ದೇಶಕರ ಸಿನಿಮಾವನ್ನು ತಯಾರಿಸಲಾಗಿತ್ತು. ಆದರೆ ಆ ಸಿನಿಮಾದಲ್ಲಿ ಕಿರು ಕಥೆಗಳನ್ನು ಸೇರಿಸಿ ಸಿನಿಮಾ ಮಾಡಲಾಗಿದೆ. ಆದರೆ ಈ ಸಿನಿಮಾ ಹಾಗಿರಲ್ಲ ಎಂದು ಹೇಳಲಾಗುತ್ತಿದೆ.