Don't Miss!
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ 'ಬಿಗ್ ಬಾಸ್' ಚೈತ್ರಾ ಕೊಟೂರು
ಬಿಗ್ ಬಾಸ್ ಸೀಸನ್ 7ರ ಸ್ಪರ್ದಿ ಚೈತ್ರಾ ಕೊಟೂರು ವಿಷ ಸೇವೆನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದು (ಏಪ್ರಿಲ್ 7) ಬೆಳಗ್ಗೆ 5 ಗಂಟೆಗೆ ವಿಷ ಸೇವಿಸಿರುವ ಚೈತ್ರಾ ಕೊಟೂರು ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Recommended Video
ಮದುವೆ ವಿಚಾರಕ್ಕೆ ತೀವ್ರವಾಗಿ ಮನನೊಂದಿದ್ದ ಚೈತ್ರಾ ಪಿನಾಯಿಲ್ ಸೇವಿಸಿ ಸಾಯಲು ಯತ್ನಿಸಿದರು ಎಂದು ತಂದೆ ನಾರಾಯಣಪ್ಪ ಸ್ಪಷ್ಟನೆ ನೀಡಿದ್ದಾರೆ. ಕೂಡಲೇ ಚೈತ್ರಾ ಅವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಚೈತ್ರಾ ಕೊಟೂರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮುಂದೆ ಓದಿ...
ಎರಡು ಬಾರಿ ಆತ್ಮಹತ್ಯಗೆ ಯತ್ನಿಸಿದ್ದರು
ನಾಗಾರ್ಜುನ್ ಜೊತೆಗಿನ ವಿವಾಹಕ್ಕೆ ಸಂಬಂಧಿಸಿದಂತೆ ಮನನೊಂದ ಚೈತ್ರಾ ಕೊಟೂರು ಅದಾಗಲೇ ಎರಡು ಸಲ ಆತ್ಮಹತ್ಯಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಈಗ ಮೂರನೇ ಬಾರಿ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದಾರೆ ಎಂದು ತಂದೆ ನಾರಾಯಣಪ್ಪ ಕಣ್ಣೀರು ಹಾಕಿದ್ದಾರೆ.
Exclusive: ನಡತೆಗೆಟ್ಟವಳು ಎಂದಿದ್ದಾರೆ, ಕೊಲೆ ಬೆದರಿಕೆ ಹಾಕಿದ್ದಾರೆ: ವಿವಾದದ ಬಗ್ಗೆ ಚೈತ್ರಾ ಪ್ರತಿಕ್ರಿಯೆ
ಮಾರ್ಚ್ 28ಕ್ಕೆ ನಡೆದಿದ್ದ ವಿವಾಹ
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಾರ್ಚ್ 28 ರಂದು ನಾಗಾರ್ಜುನ್ ಎನ್ನುವವರ ಚೈತ್ರಾ ಕೊಟೂರು ವಿವಾಹವಾಗಿದ್ದರು. ಮಂಡ್ಯ ಮೂಲದ ಉದ್ಯಮಿ ನಾಗರಾರ್ಜುನ್ ಜೊತೆ ಕೆಲವು ಸಂಘಟನೆಗಳ ಸಮ್ಮುಖದಲ್ಲಿ ಖಾಸಗಿಯಾಗಿ ಮದುವೆಯಾಗಿದ್ದರು. ಮದುವೆಯಾದ ದಿನವೇ 'ಚೈತ್ರಾ ಅಂದ್ರೆ ಇಷ್ಟವಿಲ್ಲ, ಇದು ಬಲವಂತದ ಮದುವೆ' ಎಂದು ನಾಗಾರ್ಜುನ್ ಹಾಗೂ ಅವರ ಕುಟುಂಬದವರು ತಿರುಗಿಬಿದ್ದರು.
ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಘಟನೆ
ಈ ಸಂಬಂಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತ್ರಾ ಕೊಟೂರು ಮತ್ತು ನಾಗಾರ್ಜುನ್ ಕುಟುಂಬಗಳು ಕೂತು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂದು ಪೊಲೀಸರು ಸೂಚಿಸಿದ್ದರು. ಅದಕ್ಕಾಗಿ ಸಮಯ ನೀಡಿದ್ದರು.
ಬೆಳಿಗ್ಗೆ ಹಸೆಮಣೆ ಏರಿದ್ದ ಮಾಜಿ ಬಿಗ್ಬಾಸ್ ಸ್ಪರ್ಧಿ ಸಂಜೆ ವೇಳೆಗೆ ಪೊಲೀಸ್ ಠಾಣೆಯಲ್ಲಿ!
ಮಾತುಕತೆಗೆ ನಿರ್ಲಕ್ಷ್ಯ
ಪೊಲೀಸರ ಸೂಚನೆ ಹಿನ್ನೆಲೆ ನಾಗಾರ್ಜುನ್ ಕುಟುಂಬದವರು ಮತ್ತು ಚೈತ್ರಾ ಕೊಟೂರು ನಡುವೆ ಮಾತುಕತೆ ಆಗಬೇಕಿತ್ತು. ಆದರೆ, ಮದುವೆ ವಿಚಾರವಾಗಿ ಮಾತುಕತೆಗೆ ನಾಗಾರ್ಜುನ್ ಕಡೆಯವರು ಬರಲಿಲ್ಲ, ಮಾತುಕತೆಗೆ ನಿರ್ಲಕ್ಷ್ಯ ಮಾಡಿದ್ದಕ್ಕೆ ಚೈತ್ರಾ ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.