ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನವಾಗಿದ್ದ ಸುನಾಮಿ ಕಿಟ್ಟಿಗೆ ಜಾಮೀನು
Recommended Video

'ಬಿಗ್ ಬಾಸ್' ಸೇರಿದಂತೆ ಕನ್ನಡದ ಕೆಲವು ರಿಯಾಲಿಟಿ ಶೋಗಳ ಮೂಲಕ ಹೆಸರು ಮಾಡಿದ್ದ ಸುನಾಮಿ ಕಿಟ್ಟಿ ಮಾರ್ಚ್ ತಿಂಗಳಲ್ಲಿ ಜೈಲು ಪಾಲಾಗಿದ್ದರು. ತನ್ನ ಸ್ನೇಹಿತ ಸುನಿಲ್ ಪತ್ನಿಯ ಪ್ರಿಯಕರ ತೌಶೀಕ್ ನನ್ನ ಕಿಡ್ನಾಪ್ ಮಾಡಿ, ಹಲ್ಲೆ ಮಾಡಿರುವ ಆರೋಪದಡಿ ಬಂಧನವಾಗಿದ್ದರು.
ನ್ಯಾಯಾಂಗ ಬಂಧನದಲ್ಲಿದ್ದ ಸುನಾಮಿ ಕಿಟ್ಟಿ ನ್ಯಾಯಾಲಯದಲ್ಲಿ ಜಾಮೀನು ಸರ್ಜಿಯನ್ನ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.
1 ಲಕ್ಷ ಮೊತ್ತದ ಬಾಂಡ್, ಒಬ್ಬರ ಭದ್ರತೆ ನೀಡಬೇಕು, ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.

ತನ್ನ ಸ್ನೇಹಿತ ಸುನಿಲ್ ಪತ್ನಿಯ ಪ್ರಿಯಕರ ತೌಶೀಕ್ ನನ್ನ ಕಿಡ್ನಾಪ್ ಮಾಡಿ ಹೊರಮಾವು ಬಳಿಯ ತೋಟದ ಮನೆಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಚಾಕುವಿನಿಂದ ತೌಶೀಕ್ ಎದೆ ಮತ್ತು ತೊಡೆ ಭಾಗಕ್ಕೆ ಸುನಾಮಿ ಕಿಟ್ಟಿ ಮತ್ತು ಸುನೀಲ್ ಟೀಮ್ ಇರಿದಿದ್ದರು. ಬಳಿಕ ಜ್ಞಾನ ಭಾರತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸುನಾಮಿ ಕಿಟ್ಟಿ ಯೋಗೇಂದ್ರ ಮತ್ತು ಅರ್ಜುನ್ ನನ್ನು ಬಂದಿಸಿದ್ದರು.
ಘಟನೆ ನಡೆದದ್ದು 2018ನೇ ಫೆಬ್ರುವರಿ 25ರಂದು. ಆದರೆ, ಪೊಲೀಸ್ ಠಾಣೆಯಲ್ಲಿ 2018ರ ಮಾರ್ಚ್ 2 ರಂದು ದೂರು ದಾಖಲಿಸಲಾಗಿತ್ತು.


Click it and Unblock the Notifications











