Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಮಿಡಿ ಚಿತ್ರದಲ್ಲಿ ಮಾಜಿ ಸಿಎಂ ಸದಾನಂದ ಗೌಡ
ಮೊದಲೇ ಕಾಮಿಡಿ ಚಿತ್ರ. ಇನ್ನು ನಮ್ಮ ಮಾಜಿ ಸಿಎಂ ಸದಾನಂದ ಗೌಡರಿದ್ದರಂತೂ ಮನರಂಜನೆಗೆ ನಯಾಪೈಸೆ ಮೋಸವಾಗಲ್ಲ. ಇದನ್ನು ನಿರ್ದೇಶಕ ಸಾಯಿಕೃಷ್ಣ ಕುಡ್ಲ ಅವರು ಚೆನ್ನಾಗಿ ಅರಿತಿರುವಂತಿದೆ. ಅದಕ್ಕಾಗಿಯೇ ತಮ್ಮ 'ಚೆಲ್ಲಾಪಿಲ್ಲಿ' ಚಿತ್ರಕ್ಕಾಗಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರನ್ನು ಬಣ್ಣದ ಲೋಕಕ್ಕೆ ಕರೆತರುತ್ತಿದ್ದಾರೆ.
ಈಗಾಗಲೆ ಮೊದಲ ಹಂತಹ ಚಿತ್ರೀಕರಣ ಮುಗಿಸಿರುವ 'ಚೆಲ್ಲಾಪಿಲ್ಲಿ' ಚಿತ್ರಕ್ಕಾಗಿ ಸದಾನಂದ ಗೌಡರೊಂದಿಗೆ ಮಾತುಕತೆಯಾಗಿದೆ. ಅವರು ಅಭಿನಯಿಸುವುದೊಂದು ಬಾಕಿ ಇದೆ. ಈ ಚಿತ್ರದಲ್ಲೂ ಅವರದು ಮಾಜಿ ಸಿಎಂ ಪಾತ್ರ. ಸದಾನಂದ ಗೌಡರ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನುತ್ತವೆ ಮೂಲಗಳು.
ಈ ಚಿತ್ರದಲ್ಲಿ ಅವರದು ಅತಿಥಿ ಪಾತ್ರ. ಎರಡನೇ ಹಂತದ ಚಿತ್ರೀಕರಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಚಿತ್ರದ ಕಥೆ ಅವರಿಗೆ ಇಷ್ಟವಾಗಿದೆಯಂತೆ. ವಿಜಯ ರಾಘವೇಂದ್ರ, ಐಶ್ವರ್ಯಾ ನಾಗ್, ಶೋಭಾರಾಜ್ ಮುಖ್ಯಭೂಮಿಕೆಯಲ್ಲಿರುವ ಚಿತ್ರ ಇದಾಗಿದೆ.
ಶಿನೆಸಿಟಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುದೀಶ್ ಭಂಡಾರಿ, ಸುಕೇಶ್ ಭಂಡಾರಿ ನಿರ್ಮಿಸುತ್ತಿರುವ ಚಿತ್ರವಿದು. ಈ ಚಿತ್ರ ಔಟ್ ಅಂಡ್ ಔಟ್ ಮನರಂಜನಾತ್ಮಕವಾಗಿರುತ್ತದೆ. "Laughter is the best Medicine" ಎಂಬ ಆಂಗ್ಲ ನಾಣ್ಣುಡಿಗೆ ಅನ್ವರ್ಥವಾಗಿ ಈ ಚಿತ್ರ ಇರುತ್ತದೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು. (ಏಜೆನ್ಸೀಸ್)