Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುಷ್ಕರ್ಮಿಗಳಿಂದ 'RJ ರಾಜೇಶ್' ಬರ್ಬರ ಕೊಲೆ
ಕೇರಳದ ಮಾಜಿ ರೇಡಿಯೋ ಜಾಕಿ ರಾಜೇಶ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಮಂಗಳವಾರ ರಾತ್ರಿ ಸುಮಾರು 1.30ರ ವೇಳೆಗೆ ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದ್ದು, ರಾಜೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮ ಮುಗಿಸಿ ಕೇರಳದ ಅತ್ತಿಗಲ್ ಬಳಿ ಮಾಧವ್ ಪುರದಲ್ಲಿರುವ ಸ್ಟುಡಿಯೋಗೆ ವಾಪಸ್ ಆದಾಗ ಆರ್.ಜೆ ರಾಜೇಶ್ ಮತ್ತು ಸ್ನೇಹಿತ ಕುಟ್ಟನ್ ಮೇಲೆ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಈ ವೇಳೆ ತೀವ್ರ ಗಾಯಗೊಂಡಿದ್ದ ರಾಜೇಶ್ ಮೃತಪಟ್ಟಿದ್ದರೇ, ಕುಟ್ಟನ್ ಗೆ ಗಂಭೀರ ಗಾಯವಾಗಿದೆ.
ಈ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಜೆ ರಾಜೇಶ್ ಅವರ ಸ್ನೇಹಿತ ಕುಟ್ಟನ್ ಹೇಳಿಕೆಯ ಪ್ರಕಾರ ''ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ನಾಲ್ಕು ಜನರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದರು. ಅವರು ಯಾರು ಎಂದು ನನಗೆ ಗೊತ್ತಿಲ್ಲ'' ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೇರಳ ಪೊಲೀಸರು ತನಿಖೆ ಕೈಗೊಂಡಿದ್ದು, ರಾಜೇಶ್ ಅವರಿಗೆ ಯಾವುದೇ ಶತ್ರುಗಳಿಲ್ಲ. ಈ ಹತ್ಯೆಗೆ ಕಾರಣವೇನು ಎಂಬುದು ತಿಳಿದಿಲ್ಲ. ಸದ್ಯಕ್ಕೆ ಕುಟ್ಟನ್ ಅವರ ಹೇಳಿಕೆ ಪಡೆದುಕೊಂಡಿದ್ದು, ಮುಂದಿನ ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.
ಇನ್ನು ರಾಜೇಶ್ ಅವರು ಎಫ್.ಎಮ್ ವಾಹಿನಿಯಲ್ಲಿ ರೇಡಿಯೋ ಜಾಕಿ ಆಗಿ ಕೆಲಸ ನಿರ್ವಹಿಸುತ್ತಿದ್ದರು. ನಂತರ ಆ ಕೆಲಸವನ್ನ ಬಿಟ್ಟು ಪ್ರೈವೇಟ್ ರೇಡಿಯೋ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. 35 ವರ್ಷದ ರಾಜೇಶ್ ಅವರಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ.