Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಅಪಹರಣದ ನಡುವೆ ಬಂದ 'ಗಲಾಟೆ ಅಳಿಯಂದ್ರು' ಚಿತ್ರಕ್ಕೆ 20 ವರ್ಷ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕರಾಗಿ ನಟಿಸಿದ್ದ 'ಗಲಾಟೆ ಅಳಿಯಂದ್ರು' ಸಿನಿಮಾ ತೆರೆಕಂಡು ಇಂದಿಗೆ 20 ವರ್ಷ ಕಳೆದಿದೆ. ಈ ಚಿತ್ರ ಬಿಡುಗಡೆಯಾಗಿ 2 ದಶಕ ಆಗಿದೆ ಎಂದು ಸ್ಮರಿಸಿಕೊಂಡಾಗ ಡಾ ರಾಜ್ ಕುಮಾರ್ ಅಪಹರಣದ ಘಟನೆಯೂ ನೆನಪಾಗುತ್ತದೆ.
ಎಸ್ ನಾರಾಯಣ್ ನಟಿಸಿ, ನಿರ್ದೇಶಿಸಿದ ಈ ಚಿತ್ರವನ್ನು ಅನಿತಾ ಕುಮಾರಸ್ವಾಮಿ ನಿರ್ಮಾಣ ಮಾಡಿದ್ದರು. ಕೌಟುಂಬಿಕ ಮನರಂಜನೆ ಕಥೆ ಹೊಂದಿದ್ದ ಈ ಚಿತ್ರ ಯಶಸ್ಸು ಸಹ ಕಂಡಿತ್ತು. ಗಲಾಟೆ ಅಳಿಯಂದ್ರು ಚಿತ್ರಕ್ಕೂ ರಾಜ್ ಕುಮಾರ್ ಅಪಹರಣದ ಘಟನೆಗೂ ಏನು ಸಂಬಂಧ? ಮುಂದೆ ಓದಿ....
ಡಾ. ರಾಜ್ ಕುಮಾರ್ ಅಪಹರಣ: ಆ ಕರಾಳ ಘಟನೆಗೆ 20 ವರ್ಷ
ಜುಲೈ 30 ರಂದು ರಾಜ್ ಕಿಡ್ನಾಪ್
ಜುಲೈ 30, 2000ನೇ ಇಸವಿಯಲ್ಲಿ ಗಾಜನೂರಿನಿಂದ ಡಾ ರಾಜ್ ಕುಮಾರ್ ಕಿಡ್ನಾಪ್ ಆಗ್ತಾರೆ. ಕಾಡುಗಳ್ಳ ವೀರಪ್ಪನ್ ತನ್ನ ಸಹಚರರೊಂದಿಗೆ ಅಣ್ಣಾವ್ರ ಮನೆಗೆ ನುಗ್ಗಿ ಕರೆದುಕೊಂಡು ಹೋಗಿದ್ದ. 108 ದಿನಗಳ ಬಳಿಕ ವಾಪಸ್ ಕಳುಹಿಸಿಕೊಟ್ಟಿದ್ದ. ಅಣ್ಣಾವ್ರು ಕಿಡ್ನಾಪ್ ಆದ ಸುದ್ದಿ ತಿಳಿಯುತ್ತಿದ್ದಂತೆ ಕರ್ನಾಟಕದಲ್ಲಿ ಪ್ರತಿಭಟನೆಗಳು, ಹೋರಾಟ, ಬಂದ್ ಸದ್ದು ಮಾಡಿದ್ದವು.
ಸೆಪ್ಟೆಂಬರ್ 29ಕ್ಕೆ ಸಿನಿಮಾ ರಿಲೀಸ್
ಅಣ್ಣಾವ್ರು ಕಿಡ್ನಾಪ್ ಆಗಿ ಸುಮಾರು 50 ದಿನಕ್ಕೂ ಹೆಚ್ಚು ದಿನಗಳು ಕಳೆದು ಹೋಗಿತ್ತು. ರಾಜ್ ಕುಮಾರ್ ಅವರನ್ನು ಕಳುಹಿಸಿಕೊಡುವ ಬಗ್ಗೆ ವೀರಪ್ಪನ್ ಸುಳಿವು ಸಹ ಕೊಟ್ಟಿರಲಿಲ್ಲ. ನಿಧಾನವಾಗಿ ಚೇತರಿಸಿಕೊಂಡ ಚಿತ್ರತಂಡ ಸಿನಿಮಾ ರಿಲೀಸ್ ಮಾಡಲು ಮುಂದಾಗಿತ್ತು. ಹೀಗೆ, ಕಹಿ ಘಟನೆಯ ನಡುವೆ ಸೆಪ್ಟೆಂಬರ್ 29, 2000ನೇ ಇಸವಿಯಲ್ಲಿ 'ಗಲಾಟೆ ಅಳಿಯಂದ್ರು' ಸಿನಿಮಾ ತೆರೆಕಂಡಿತ್ತು.
ಶಿವಣ್ಣ-ಎಸ್ ನಾರಾಯಣ್ ಸಿನಿಮಾ
'ಗಲಾಟೆ ಅಳಿಯಂದ್ರು' ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಾಯಕರಾಗಿ ನಟಿಸಿದ್ದು, ಎಸ್ ನಾರಾಯಣ್ ಸಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಖುದ್ದು ನಾರಾಯಣ್ ಈ ಚಿತ್ರ ನಿರ್ದೇಶನ ಮಾಡಿದ್ದರು. ಅನಿತಾ ಕುಮಾರಸ್ವಾಮಿ ನಿರ್ಮಿಸಿದ್ದರು. ಸಾಕ್ಷಿ ಶಿವಾನಂದ್ ನಾಯಕಿಯಾಗಿದ್ದರು. ತಾರಾ, ದೊಡ್ಡಣ್ಣ ಸೇರಿದಂತೆ ಹಲವರು ನಟಿಸಿದ್ದರು.
Recommended Video
ತಮಿಳಿನ ರೀಮೇಕ್!
ತಮಿಳಿನ 'Ullathai Allitha' ಚಿತ್ರದ ರೀಮೇಕ್ ಇದಾಗಿತ್ತು. ತಮಿಳಿನಲ್ಲಿ ಕಾರ್ತಿಕ್, ರಂಭಾ ನಟಿಸಿದ್ದರು. ಕನ್ನಡದಲ್ಲೂ ಈ ಚಿತ್ರ ಹಿಟ್ ಆಗಿತ್ತು. ದೇವ ಅವರ ಸಂಗೀತ ಹಾಗೂ ಎಸ್ ನಾರಾಯಣ್-ಕೆ ಕಲ್ಯಾಣ್ ಸಾಹಿತ್ಯದ ಕಾಂಬಿನೇಷನ್ನಲ್ಲಿ ಬಂದಿದ್ದ ಹಾಡುಗಳು ಸೂಪರ್ ಹಿಟ್ ಆಗಿತ್ತು.