Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಗಣೇಶ್ ಮನ ಗೆದ್ದ ಸಿದ್ದಗಂಗಾ ಹುಡುಗ
ಸಿದ್ದಗಂಗಾ ಮಠದ ವಿದ್ಯಾರ್ಥಿಯ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆ ವಿಡಿಯೋ ನೋಡಿದ ಪ್ರತಿಯೊಬ್ಬರು ಲೈಕ್ ಒತ್ತದೆ ಮುಂದೆ ಹೋಗುತ್ತಿಲ್ಲ. ಈ ರೀತಿ ಜನರ ಮನ ಗೆದ್ದಿರುವ ಈ ಹುಡುಗ ಈಗ ನಟ ಗಣೇಶ್ ರಿಗೂ ಇಷ್ಟ ಆಗಿದ್ದಾನೆ.
'ದೊಡ್ಮನೆ' ನಟರ ಮೇಲಿತ್ತು ಸಿದ್ಧಗಂಗಾ ಶ್ರೀಗಳ ಆಶೀರ್ವಾದ
''ಅನ್ನ ದೇವರಿಗಿಂತ ಅನ್ಯ ದೇವರಿಲ್ಲ'' ಎನ್ನುವ ಮಾತಿದೆ. ಅದನ್ನು ಅಕ್ಷರಶಃ ಸಿದ್ದಗಂಗಾ ಮಠದಲ್ಲಿ ಪಾಲಿಸಲಾಗುತ್ತಿದೆ. ಅಲ್ಲಿಯೇ ಓದುತ್ತಿರುವ ಒಬ್ಬ ಹುಡುಗ ಅನ್ನದ ಮಹತ್ವವನ್ನು ಸಾರಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿದೆ.
ಶ್ರೀ ಶಿವಕುಮಾರ ಸ್ವಾಮಿಗಳ ಅಗಲಿಕೆಯ ಕಾರಣ ಮಠದಲ್ಲಿ ಲಕ್ಷಾಂತರ ಜನಕ್ಕೆ ಪ್ರಸಾದ ವಿನಿಯೋಗ ಮಾಡಲಾಗಿತ್ತು. ಈ ವೇಳೆ ಊಟವನ್ನು ಚೆಲ್ಲುತ್ತಿದ್ದ ವ್ಯಕ್ತಿಗೆ ಮಠದ ವಿದ್ಯಾರ್ಥಿ ಅನ್ನದ ಬೆಲೆಯನ್ನ ಹೇಳಿ ಕೊಟ್ಟಿದ್ದಾನೆ.
ವೈರಲ್ ವಿಡಿಯೋ: ಶ್ರೀಗಳು ನಮ್ಮನ್ನಗಲಿಲ್ಲ,ಇಂಥ ಮಕ್ಕಳಲ್ಲಿದ್ದಾರೆ ನೋಡಿ..!
ಈ ಹುಡುಗನ ವಿಡಿಯೋವನ್ನು ನಟ ಗಣೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅನ್ನದ ಬೆಲೆ ಸಿದ್ದಗಂಗಾ ಮಠದ ಮಕ್ಕಳಿಗೆ ಗೊತ್ತು ಎಂದು ಆ ಹುಡುಗನ ಕಾರ್ಯವನ್ನು ಮೆಚ್ಚಿದ್ದಾರೆ. ಗಣೇಶ್ ಮಾತ್ರವಲ್ಲದೆ ನಟ ರವಿಶಂಕರ್ ಗೌಡ ಸಹ ಈ ವಿಡಿಯೋ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.