ನಟ ಗಣೇಶ್ ಮನ ಗೆದ್ದ ಸಿದ್ದಗಂಗಾ ಹುಡುಗ

ಸಿದ್ದಗಂಗಾ ಮಠದ ವಿದ್ಯಾರ್ಥಿಯ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆ ವಿಡಿಯೋ ನೋಡಿದ ಪ್ರತಿಯೊಬ್ಬರು ಲೈಕ್ ಒತ್ತದೆ ಮುಂದೆ ಹೋಗುತ್ತಿಲ್ಲ. ಈ ರೀತಿ ಜನರ ಮನ ಗೆದ್ದಿರುವ ಈ ಹುಡುಗ ಈಗ ನಟ ಗಣೇಶ್ ರಿಗೂ ಇಷ್ಟ ಆಗಿದ್ದಾನೆ.

''ಅನ್ನ ದೇವರಿಗಿಂತ ಅನ್ಯ ದೇವರಿಲ್ಲ'' ಎನ್ನುವ ಮಾತಿದೆ. ಅದನ್ನು ಅಕ್ಷರಶಃ ಸಿದ್ದಗಂಗಾ ಮಠದಲ್ಲಿ ಪಾಲಿಸಲಾಗುತ್ತಿದೆ. ಅಲ್ಲಿಯೇ ಓದುತ್ತಿರುವ ಒಬ್ಬ ಹುಡುಗ ಅನ್ನದ ಮಹತ್ವವನ್ನು ಸಾರಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿದೆ.

ganesh appreciate siddaganga mutt boy who is requesting people to not waste food

ಶ್ರೀ ಶಿವಕುಮಾರ ಸ್ವಾಮಿಗಳ ಅಗಲಿಕೆಯ ಕಾರಣ ಮಠದಲ್ಲಿ ಲಕ್ಷಾಂತರ ಜನಕ್ಕೆ ಪ್ರಸಾದ ವಿನಿಯೋಗ ಮಾಡಲಾಗಿತ್ತು. ಈ ವೇಳೆ ಊಟವನ್ನು ಚೆಲ್ಲುತ್ತಿದ್ದ ವ್ಯಕ್ತಿಗೆ ಮಠದ ವಿದ್ಯಾರ್ಥಿ ಅನ್ನದ ಬೆಲೆಯನ್ನ ಹೇಳಿ ಕೊಟ್ಟಿದ್ದಾನೆ.

ವೈರಲ್ ವಿಡಿಯೋ: ಶ್ರೀಗಳು ನಮ್ಮನ್ನಗಲಿಲ್ಲ,ಇಂಥ ಮಕ್ಕಳಲ್ಲಿದ್ದಾರೆ ನೋಡಿ..!

ಈ ಹುಡುಗನ ವಿಡಿಯೋವನ್ನು ನಟ ಗಣೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅನ್ನದ ಬೆಲೆ ಸಿದ್ದಗಂಗಾ ಮಠದ ಮಕ್ಕಳಿಗೆ ಗೊತ್ತು ಎಂದು ಆ ಹುಡುಗನ ಕಾರ್ಯವನ್ನು ಮೆಚ್ಚಿದ್ದಾರೆ. ಗಣೇಶ್ ಮಾತ್ರವಲ್ಲದೆ ನಟ ರವಿಶಂಕರ್ ಗೌಡ ಸಹ ಈ ವಿಡಿಯೋ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.

More from Filmibeat

English summary
Actor Ganesh appreciate Siddaganga Mutt boy who is requesting people to not waste food.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X