Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಹಬ್ಬಕ್ಕೆ ಹೊಸ ಪೋಸ್ಟರ್ ಹಂಚಿಕೊಂಡ ಚಿತ್ರಗಳು, ಯಾವುದು ಇಷ್ಟ ಆಯ್ತು?
ಕೊರೊನಾ ವೈರಸ್ ಭೀತಿ ಇಲ್ಲದೇ ಹೋಗಿದ್ದರೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎರಡು ಅಥವಾ ಮೂರು ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ, ಕೊರೊನಾ ಎಂಬ ಅನಿರೀಕ್ಷಿತ ರೋಗ ಸಿನಿಪ್ರೇಮಿಗಳನ್ನು ನಿರಾಸೆಯಾಗುವಂತೆ ಮಾಡಿದೆ.
Recommended Video
ಸಿನಿಮಾ ನೋಡಲು ಸಾಧ್ಯವಾಗಲಿಲ್ಲ ಎಂಬ ನಿರಾಸೆಯನ್ನು ಮರೆಮಾಚಲು ನಿರೀಕ್ಷೆಯ ಚಿತ್ರಗಳು ಹೊಸ ಹೊಸ ಪೋಸ್ಟರ್ಗಳನ್ನು ರಿಲೀಸ್ ಮಾಡಿ ಗಣೇಶ ಹಬ್ಬಕ್ಕೆ ಶುಭಕೋರಿದೆ. ಹಾಗಾದ್ರೆ, ಯಾವ ಯಾವ ಚಿತ್ರತಂಡ ಗೌರಿ-ಗಣೇಶ ಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಿದೆ ಎಂದು ತಿಳಿಯೋಣ ಬನ್ನಿ. ಮುಂದೆ ಓದಿ....
ಗಣೇಶ ಪೆಂಡಲ್ಗಳ ಬಳಿ ಈ ವರ್ಷ ಸದ್ದು ಮಾಡುವ ಮಾಸ್ ಸಾಂಗ್ಸ್ ಇವೆ!
ಗಾಳಿಪಟ 2
ಯೋಗರಾಜ್ ಭಟ್ ನಿರ್ದೇಶನ ಮಾಡುತ್ತಿರುವ ಗಾಳಿಪಟ 2 ಚಿತ್ರತಂಡ ಗೌರಿ ಗಣೇಶ ಹಬ್ಬಕ್ಕೆ ಶುಭ ಕೋರಿದೆ. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಬಡವ ರಾಸ್ಕಲ್
ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾ ಬಡವ ರಾಸ್ಕಲ್. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಆಟೋ ಡ್ರೈವರ್ ಗೆಟಪ್ನಲ್ಲಿ ಡಾಲಿ ಮಿಂಚಿದ್ದಾರೆ. ವಿಶೇಷ ಅಂದ್ರೆ ಇಂದು ಧನಂಜಯ್ ಅವರ ಹುಟ್ಟುಹಬ್ಬ.
ದರ್ಶನ್ ಪತ್ನಿ-ಮಗನ ಕೈಯಲ್ಲಿರುವ ಈ ಗಣೇಶ ಸ್ಪೆಷಲ್ ಏಕೆ?
ಫ್ಯಾಂಟಮ್ ಪೋಸ್ಟರ್
ಕಿಚ್ಚ ಸುದೀಪ್ ನಟಿಸುತ್ತಿರುವ ಫ್ಯಾಂಟಮ್ ಸಿನಿಮಾ ತಂಡವೂ ಗೌರಿ ಗಣೇಶ ಹಬ್ಬಕ್ಕೆ ಶುಭಾಶಯ ತಿಳಿಸಿದೆ. ಅನೂಪ್ ಭಂಡಾರಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ನಿರೂಪ್ ಭಂಡಾರಿ, ಅಪರ್ಣ ಬಲ್ಲಾಳ್ ಸಹ ತಾರಾಬಳಗದಲ್ಲಿದ್ದಾರೆ.
ದರ್ಶನ್ 'ರಾಬರ್ಟ್'
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಸಹ ಅಭಿಮಾನಿಗಳಿಗೆ ಗೌರಿ ಗಣೇಶ ಹಬ್ಬಕ್ಕೆ ಶುಭಾಶಯ ತಿಳಿಸಿದೆ. ತರುಣ್ ಸುಧೀರ್ ಈ ಚಿತ್ರ ನಿರ್ದೇಶಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಿಸಿದ್ದಾರೆ.
ಮುಗಿಲುಪೇಟೆ
ರವಿಚಂದ್ರನ್ ಅವರ ಪುತ್ರ ಮನೋರಂಜನ್ ನಟಿಸುತ್ತಿರುವ ಮುಗಿಲುಪೇಟೆ ಚಿತ್ರತಂಡ ಗೌರಿ ಗಣೇಶ ಹಬ್ಬಕ್ಕೆ ವಿಶ್ ಮಾಡಿದೆ. ಭರತ್ ಎಸ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ರಿಷಿ, ತಾರಾ, ಅವಿನಾಶ್, ರಂಗಾಯಣ ರಘು, ಸಾಧುಕೋಕಿಲಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
ಸಖತ್ ಸಿನಿಮಾ
ಗಣೇಶ ಹಬ್ಬದ ಪ್ರಯುಕ್ತ ಗೋಲ್ಡನ್ ಸ್ಟಾರ್ ಗಣೇಶ ನಟಿಸುತ್ತಿರುವ ಸಖತ್ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಸಿಂಪಲ್ ಸುನಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.