Don't Miss!
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- News ಚೊಂಬನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿ ಪಿಕ್ಪಾಕೆಟ್ ಜಾಹೀರಾತು- ಡಿಕೆಶಿ ವಾಗ್ದಾಳಿ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್-ಯೋಗರಾಜ್ ಭಟ್ಟರ 'ಮುಂಗಾರು ಮಳೆ'ಗೆ 14 ವರ್ಷ ತುಂಬಿದ ಸಂತಸ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು.
ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗೋಲ್ಡನ್ ಸ್ಟಾರ್ ಜೊತೆ 'ತ್ರಿಬಲ್ ರೈಡಿಂಗ್' ಆರಂಭಿಸಿದ ಮೇಘಾ ಶೆಟ್ಟಿ
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.
ಮನೋ ಮೂರ್ತಿ ಸಂಗೀತಕ್ಕೆ ಗಾನಪ್ರಿಯರು ಫಿದಾ
ಖ್ಯಾತ ಸಂಗೀತ ನಿರ್ದೇಶಕ ಮನೋ ಮೂರ್ತಿ ಅವರ ಸಂಗೀತ ಇಂದಿಗೂ ಮತ್ತೆ ಮತ್ತೆ ಕೇಳಬೇಕು ಅನಿಸುತ್ತದೆ. ಅನಿಸುತಿದೆ ಯಾಕೋ ಇಂದು.. ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ... ಹಾಡುಗಳು ಎಲ್ಲರ ಬಾಯಲ್ಲು ಗುನುಗುವಂತೆ ಮಾಡಿದೆ.
ಗಣೇಶ್ ನಟನೆಯ 'ಮಳೆಯಲಿ ಜೊತೆಯಲಿ' ಚಿತ್ರಕ್ಕೆ 11 ವರ್ಷ
ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.
ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
Recommended Video
ಗಣೇಶ್ ಬಳಿ ಇರುವ ಸಿನಿಮಾಗಳು
ಗಣೇಶ್ ಸದ್ಯ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ಸಖತ್, ಗಾಳಿಪಟ-2 ಸೇರಿದಂತೆ ಇನ್ನು ಹೆಸರಿಡದ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಯೋಗರಾಜ್ ಭಟ್ ಸದ್ಯ ಗಾಳಿಪಟ-2 ಸಿನಿಮಾದಲ್ಲಿ ನಿರತರಾಗಿದ್ದಾರೆ.