Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ 'ಮುಂಗಾರು ಮಳೆ-2'ಗೆ ಅದ್ದೂರಿ ಮುಹೂರ್ತ
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಶಾಂಕ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ 'ಮುಂಗಾರು ಮಳೆ-2' ಚಿತ್ರದ ಮುಹೂರ್ತ ಇಂದು ನೆರವೇರಿದೆ.
ಇ.ಕೆ.ಪಿಕ್ಚರ್ಸ್ ಲಾಂಛನದಡಿಯಲ್ಲಿ ಜಿ.ಗಂಗಾಧರ್ ನಿರ್ಮಿಸುತ್ತಿರುವ ಚಿತ್ರ 'ಮುಂಗಾರು ಮಳೆ-2'. ಗಣೇಶ್ ಜೊತೆ ರವಿಚಂದ್ರನ್ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇಂದು ರಾಜಾಜಿನಗರದ ಮೋದಿ ಸರ್ಕಲ್ ಬಳಿಯಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಡೆಯಿತು. ['ಮುಂಗಾರು ಮಳೆ'ಯಲಿ ಗೋಲ್ಡನ್ ಸ್ಟಾರ್ ಜೊತೆಯಲಿ ಕ್ರೇಜಿ ಸ್ಟಾರ್! ]
'ಮುಂಗಾರು ಮಳೆ' ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ್ರೆ, ಗೋಲ್ಡ್ ಫಿಂಚ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕರಾದ ಪ್ರಕಾಶ್ ಶೆಟ್ಟಿಯವರು ಕ್ಯಾಮರಾ ಸ್ವಿಚ್ ಆನ್ ಮಾಡಿದರು. [ಸದ್ದಿಲ್ಲದೇ ಶುರುವಾಯ್ತು 'ಮುಂಗಾರು ಮಳೆ' ಅಬ್ಬರ]
ಮಳೆಯ ಆರಂಭಕ್ಕಾಗಿ ಇಲ್ಲಿಯವರೆಗೂ ಕಾಯುತ್ತಿದ್ದ ಚಿತ್ರತಂಡ, ಇಂದು ಮುಹೂರ್ತ ಮುಗಿಸಿದೆ. ಜುಲೈ ಕೊನೆಯ ವಾರದಿಂದ ಚಿತ್ರೀಕರಣ ಶುರುಮಾಡಲಿದೆ. 'ಮುಂಗಾರು ಮಳೆ-2' ಅಂತ ಟೈಟಲ್ ಇಟ್ಟ ಮಾತ್ರಕ್ಕೆ, ಇದು 'ಮುಂಗಾರು ಮಳೆ' ಚಿತ್ರದ ಮುಂದುವರಿದ ಭಾಗ ಅಲ್ಲ. [ಗಣೇಶ್ 'ಮುಂಗಾರು ಮಳೆ 2'ಕ್ಕೆ ಮುಹೂರ್ತ ಫಿಕ್ಸ್]
ಆ ಚಿತ್ರಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಖುದ್ದು ಚಿತ್ರಕಥೆ-ಸಂಭಾಷಣೆ ರಚಿಸಿ ಶಶಾಂಕ್ ನಿರ್ದೇಶಿಸುತ್ತಿರುವ ಚಿತ್ರ 'ಮುಂಗಾರು ಮಳೆ-2'. ಗಣೇಶ್ ಗೆ ತಂದೆ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಸ್ಪೆಷಾಲಿಟಿ. ಇದೀಗ ಲೊಕೇಷನ್ಸ್ ಮತ್ತು ಚಿತ್ರದ ನಾಯಕಿಯ ಹುಡುಕಾಟದಲ್ಲಿ ಚಿತ್ರತಂಡ ತೊಡಗಿದೆ.