Don't Miss!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Automobiles Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈ ಮುಂಗಾರುಮಳೆ..., ಜೈ ಜನತೆ..., ಜೈ ಜೀವನ: ಗಣಪ-ಭಟ್
ಮುಂಗಾರು ಮಳೆ......, ಅಂದಾಕ್ಷಣ ಅದ್ಭುತವಾದ ಸಾಹಿತ್ಯ, ಸುಮಧುರ ಹಾಡುಗಳು, ಒಳ್ಳೆಯ ಕಥೆ, ಬೇಸರವೇ ಬಾರದ ಸಂಭಾಷಣೆಗಳ, ಹೃದಯ ಮುಟ್ಟುವ ಅಂತ್ಯ. ಗಣೇಶ್, ಯೋಗರಾಜ್ ಭಟ್, ಪೂಜಾ ಗಾಂಧಿ, ಜಯಂತ್ ಕಾಯ್ಕಿಣಿ, ಮನೋಮೂರ್ತಿ, ಸೋನು ನಿಗಮ್, ಶ್ರೇಯ ಗೋಷಾಲ್ ನೆನಪಾಗ್ತಾರೆ.
Recommended Video
ಕನ್ನಡದ ಚಿತ್ರರಂಗದ ದಿಕ್ಕನ್ನು ಬದಲಿಸಿದ ಚಿತ್ರ, ಕನ್ನಡ ಚಿತ್ರರಂಗದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ಸಿನಿಮಾ, ಕನ್ನಡ ಚಿತ್ರರಂಗದ ಹೊಸ ಭರವಸೆಗಳನ್ನು ಮೂಡಿಸಿದ ಚಿತ್ರ, ಕನ್ನಡ ಚಿತ್ರರಂಗಕ್ಕೆ ಹೊಸ ಸ್ಟಾರ್ಗಳನ್ನು ನೀಡಿದ ಚಿತ್ರ ಬಿಡುಗಡೆಯಾಗಿ 14 ವರ್ಷ ಆಗಿದೆ.
ಗಣೇಶ್-ಯೋಗರಾಜ್ ಭಟ್ಟರ 'ಮುಂಗಾರು ಮಳೆ'ಗೆ 14 ವರ್ಷ ತುಂಬಿದ ಸಂತಸ
ಈ ಸಂದರ್ಭದಲ್ಲಿ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಟ ಗಣೇಶ್ ತಮ್ಮ ಮನದಾಳದ ಮಾತನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
''ನಮಸ್ತೆ....., ನಾವಿಬ್ಬರೂ, ಜೊತೆಗೆ ಇಡೀ ತಂಡ ಆಗ ತಾನೇ ಕಣ್ತೆರದ ಶಿಶುಗಳಂತೆ 'ಮುಂಗಾರುಮಳೆ' ಚಿತ್ರ ಮಾಡಿ, ಜನತೆಗೆ ಅರ್ಪಿಸಿ ಇಂದಿಗೆ 14 ವರ್ಷಗಳಾಗಿವೆ....ಚಿತ್ರಕ್ಕಷ್ಟೇ ಅಲ್ಲದೇ ನಮ್ಮಿಬ್ಬರಿಗೂ ಇದು ಒಂದು ರೀತಿಯ ಹುಟ್ಟುಹಬ್ಬ...ಕೆಲಸ ಕಲಿಸಿದ, ಬದುಕು ಕೊಟ್ಟ, ಪ್ರೀತಿ ತಿಳಿಸಿದ, ನಾಡು ನಲಿಸಿದ ಈ ಪ್ರೇಕ್ಷಕರ ಆಸ್ತಿಯಂತಹ ಮಹಾನ್ ಚಿತ್ರಕ್ಕೆ ನಮ್ಮಿಬ್ಬರ ದೀರ್ಘದಂಡ ನಮನಗಳು....ಜೈ ಮುಂಗಾರುಮಳೆ....ಜೈ ಜನತೆ....ಜೈ ಜೀವನ...ನಿಮ್ಮವರು - ಗಣಪ-ಯೋಗ್ರಾಜ್ ಭಟ್'' ಎಂದು ಧನ್ಯವಾದ ಅರ್ಪಿಸಿದ್ದಾರೆ.
ಅಂದ್ಹಾಗೆ, 2006ರ ಡಿಸೆಂಬರ್ 29 ರಂದು ಮುಂಗಾರುಮಳೆ ಸಿನಿಮಾ ಬಿಡುಗಡೆಯಾಗಿತ್ತು. ಇ ಕೃಷ್ಣಪ್ಪ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದರು. ಕೇವಲ 2 ಕೋಟಿಯಲ್ಲಿ ತಯಾರಾಗಿದ್ದ ಚಿತ್ರ 75 ಕೋಟಿಯವರೆಗೂ ಲಾಭ ಮಾಡಿದೆ ಎಂದು ಬಾಕ್ಸ್ ಆಫೀಸ್ನಲ್ಲಿ ವರದಿಯಾಗಿದೆ.
ಗಣೇಶ್-ಭಟ್ಟರ ಕಾಂಬಿನೇಷನ್ ಸಿನಿಮಾ
ಮುಂಗಾರುಮಳೆ ನಂತರ ಗಾಳಿಪಟ ಸಿನಿಮಾ ಮಾಡಿದ ಈ ಜೋಡಿ ಮತ್ತೊಮ್ಮೆ ಅದ್ಭುತವಾದ ಯಶಸ್ಸು ಕಂಡರು. ಬಹಳ ವರ್ಷದ ಬಳಿಕ ಮುಗುಳುನಗೆ ಎಂಬ ಚಿತ್ರ ಮಾಡಿದರು. ಈ ಗಾಳಿಪಟ 2 ಸಿನಿಮಾ ಮಾಡ್ತಿದ್ದಾರೆ.